ಉಜಿರೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ನ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಲಿಟಿ ಆಸ್ಪತ್ರೆ, ಜೆಸಿಐ ಉಜಿರೆ ಸಿಟಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ರೆಡ್ ಕ್ರಾಸ್ ರಕ್ತನಿಧಿ, ಮಂಗಳೂರು ಘಟಕದ ಸಹಯೋಗದೊಂದಿಗೆ ಆ. 22ರಂದು ಕಾಲೇಜಿನ ಸಭಾಂಗಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಶಿಬಿರವನ್ನು ರೋಟರಿ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ರೋಟೇರಿಯನ್ ಶ್ರೀಧರ್ ಕೆ.ವಿ., ಜೆಸಿಐ ಉಜಿರೆ ಸಿಟಿ ಅಧ್ಯಕ್ಷ ಮಹಮ್ಮದ್ ಮಿರ್ಶಾದ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಲಿಟಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮೇಘ ನಾಯ್ಕ ಅವರು ಜಂಟಿಯಾಗಿ ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್, ಎನ್ಎಸ್ಎಸ್ ಯೋಜನಾಧಿಕಾರಿ ಸಾಯಿಚರಣ್ ಸಿ.ಹೆಚ್. ಹಾಗೂ ವೈಆರ್ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ. ಉಪಸ್ಥಿತರಿದ್ದರು.
ಶಿಬಿರದಲ್ಲಿ ಒಟ್ಟು 39 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ರೋಟರಿ ಕ್ಲಬ್ ಬೆಳ್ತಂಗಡಿಯ ಕಾರ್ಯದರ್ಶಿ ರೋಟೇರಿಯನ್ ಡಾ. ರಾಘವೇಂದ್ರ ಪಿದಮಲೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರೋಟೇರಿಯನ್ ವಿದ್ಯಾಕುಮಾರ್ ಅವರು 55ನೇ ಬಾರಿ ರಕ್ತದಾನ ಮಾಡುವ ಮೂಲಕ ವಿಶೇಷವಾಗಿ ಗಮನ ಸೆಳೆದರು. ಅವರ ನಿರಂತರ ರಕ್ತದಾನ ಸೇವೆ ಶ್ಲಾಘನೀಯವಾಗಿದೆ.











