ಮಡಂತ್ಯಾರು : ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ನಡೆದ ವ್ಯವಹಾರ ಹಾಗೂ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ ‘ಮೃದಿನಿ’ ಕಾರ್ಯಕ್ರಮದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕದ ವ್ಯವಹಾರ ವಿಭಾಗದ ಉಪಾಧ್ಯಕ್ಷ ವಿಕ್ಟರ್ ಸುವಾರಿಸ್ ಅವರು ವಲಯ ಪ್ರತಿಷ್ಠಿತ ಸಾಧನಾಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಡಂತ್ಯಾರಿನಲ್ಲಿ ನಡೆದ ವಲಯ 15ರ ಸಮ್ಮೇಳನದಲ್ಲಿ ವಲಯಾಧ್ಯಕ್ಷರಾದ ಸಂತೋಷ್ ಶೆಟ್ಟಿ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ದಿವಂಗತ ಫಿಲೀಪ್ ಸುವಾರಿಸ್ ಹಾಗೂ ಶ್ರೀಮತಿ ಬೆನೆಡಿಕ್ಟ ಮೆಂಡೊನ್ಸಾ ದಂಪತಿಯ ದ್ವಿತೀಯ ಪುತ್ರರಾದ ವಿಕ್ಟರ್ ಸುವಾರಿಸ್ ಅವರು ಜೆಸಿಐ ಕೊಕ್ಕಡ ಕಪಿಲಾ ಘಟಕದ ಸ್ಥಾಪಕ ಸದಸ್ಯರಾಗಿದ್ದು, ಘಟಕದ ಕಾರ್ಯದರ್ಶಿ ಹಾಗೂ ವಿವಿಧ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದಲ್ಲದೆ ಇತರ ಸಂಘಟನೆಗಳ ಮೂಲಕ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಅವರ ಪತ್ನಿ ದೀಪಾ ವಿ., ಘಟಕದ ನಿಕಟಪೂರ್ವ ಅಧ್ಯಕ್ಷರಾದ ಡಾ. ಶೋಭಾ ಪಿ., ಕಾರ್ಯದರ್ಶಿ ಜೋಯಲ್ ಪಿರೇರಾ, ನೇತ್ರಾವತಿ ಪ್ರಾಂತ್ಯದ ಉಪಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ, ಜೋಸೆಫ್ ಪಿರೇರಾ, ಜೆಸಿಂತಾ ಡಿಸೋಜ, ಫಲ್ಗುಣಿ ಪ್ರಾಂತ್ಯದ ವಲಯ ಉಪಾಧ್ಯಕ್ಷ ಕಾಶೀನಾಥ್ ಗೋಗಟೆ ಉಪಸ್ಥಿತರಿದ್ದರು.











