25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೆಜ್ಜೆಗಿರಿ ಕ್ಷೇತ್ರ ಅಭಿವೃದ್ಧಿಗೆ ಜೆ.ಪಿ. ಸುಧಾಕರ್ ಅವರಿಂದ ಸಕಾರಾತ್ಮಕ ಸ್ಪಂದನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದೆತಿ ಆಯುರ್ವೇದಿಕ್ ಕೇಂದ್ರದ ಕಾಮಗಾರಿಗೆ ಸಹಕಾರ ಕೋರಿ ಬೆಂಗಳೂರಿನ ಉದ್ಯಮಿ ಶ್ರೀ ಜೆ.ಪಿ. ಸುಧಾಕರ್ ಅವರನ್ನು ಕ್ಷೇತ್ರದ ಕಾನೂನು ಸಲಹೆಗಾರ ಯುವ ನಾಯಕರಾದ ರಕ್ಷಿತ್ ಶಿವರಾಮ್ ಅವರ ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸಂಜೀವ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್, ಶ್ರೀ ನಾರಾಯಣ ಮಚ್ಚಿನ, ಕೆ. ಹರೀಶ್ ಕೆ. ಪೂಜಾರಿ ಬೈಲಬರಿ, ಸತೀಶ್ ಕಾಶಿಪಟ್ಣ ಸೇರಿದಂತೆ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

ನಿಯೋಗವು ಗೆಜ್ಜೆಗಿರಿ ಕ್ಷೇತ್ರದಲ್ಲಿ ನಡೆಯುತ್ತಿರುವ ದೇಯಿ ಬೈದೆತಿ ಆಯುರ್ವೇದಿಕ್ ಕೇಂದ್ರದ ಕಾಮಗಾರಿಯ ಪ್ರಗತಿ ಹಾಗೂ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಜೆ.ಪಿ. ಸುಧಾಕರ್ ಅವರಿಗೆ ವಿವರಿಸಿ, ಕಾಮಗಾರಿಗೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿತು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜೆ.ಪಿ. ಸುಧಾಕರ್ ಅವರು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುವ ಭರವಸೆ ನೀಡಿದರು. ಅಲ್ಲದೆ, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ ಮೇಳವನ್ನು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಆಯೋಜಿಸಲು ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

ಗೆಜ್ಜೆಗಿರಿ ಕ್ಷೇತ್ರದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಬೆಂಗಳೂರಿನಲ್ಲಿ ಹೆಚ್ಚಿನ ಪ್ರೋತ್ಸಾಹ ದೊರೆಯುವ ನಿಟ್ಟಿನಲ್ಲಿ ಜೆ.ಪಿ. ಸುಧಾಕರ್ ಅವರ ಭರವಸೆ ಮಹತ್ವದ್ದಾಗಿದೆ ಎಂದು ನಿಯೋಗದ ಸದಸ್ಯರು ತಿಳಿಸಿದ್ದಾರೆ.

Related posts

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya
error: Content is protected !!