25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನದಲ್ಲಿ ಚಿರತೆ ಓಡಾಟ: ಜನರಲ್ಲಿ ಆತಂಕ

ಬೆಳ್ತಂಗಡಿ: ತಾಲೂಕಿನ ಮಚ್ಚಿನ ಗ್ರಾಮದ ಬಳ್ಳಮಂಜ,ಪುಂಚ ಪಾದೆ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.


ಜನನಿಬಿಡ ಪ್ರದೇಶದ ಸಮೀಪದಲ್ಲಿರುವ ಅರಣ್ಯ ಪ್ರದೇಶದಲ್ಲಿ ಚಿರತೆ ಓಡಾಡುತ್ತಿರುವುದನ್ನು ಸ್ಥಳೀಯರು ಮೊಬೈಲ್‌ ನಲ್ಲಿ ವಿಡಿಯೊ ಚಿತ್ರೀಕರಿಸಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗಿದೆ.

ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಓಡಾಟ ಕಂಡುಬರುತ್ತಿದೆ ಎಂಬ ಮಾಹಿತಿ ಸ್ಥಳೀಯರಿಂದ ಕೇಳಿಬರುತ್ತಿತ್ತು. ಇದೀಗ ಚಿರತೆಯ ಚಲನವಲನದ ದೃಶ್ಯ ಸೆರೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಜನರು ಒಂಟಿಯಾಗಿ ಸಂಚರಿಸಲು ಹಿಂದೇಟು ಹಾಕುವಂತಾಗಿದೆ. ಕೃಷಿ ಚಟುವಟಿಕೆಗಳಿಗೆ ತೆರಳುವವರು ಹಾಗೂ ಜಾನುವಾರು ಸಾಕಣೆ ಮಾಡುತ್ತಿರುವವರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತಾಗಿದೆ.

ಇದರ ನಡುವೆ ಪರಿಸರದಲ್ಲಿ ಹುಲಿ ಕಾಣಿಸಿಕೊಂಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಇದರಿಂದ ಜನರಲ್ಲಿ ಮತ್ತಷ್ಟು ಆತಂಕ ಉಂಟಾಗಿದೆ. ಆದರೆ ಅರಣ್ಯ ಇಲಾಖೆ ಈ ಭಾಗದಲ್ಲಿ ಹುಲಿ ಓಡಾಟ ಇರುವ ಸಾಧ್ಯತೆಯನ್ನು ತಳ್ಳಿಹಾಕಿದೆ. ಈ ಪರಿಸರದಲ್ಲಿ ಈ ಹಿಂದೆಯೂ ಚಿರತೆ ಓಡಾಟದ ಕುರಿತು ಮಾಹಿತಿ ಲಭಿಸಿತ್ತು ಎಂದು ಅರಣ್ಯ ಇಲಾಖೆ ತಿಳಿಸಿದೆ.

Related posts

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya
error: Content is protected !!