August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಸಮಗ್ರ ಅಭಿವೃದ್ಧಿ ಹಾಗೂ ಭವಿಷ್ಯದ ಯೋಜನೆಗಳ ಕುರಿತು ಚರ್ಚಿಸುವ ಉದ್ದೇಶದಿಂದ, ಶ್ರೀ ಕ್ಷೇತ್ರದ ಕಾನೂನು ಸಲಹೆಗಾರ ಹಾಗೂ ಯುವ ನಾಯಕ ರಕ್ಷಿತ್ ಶಿವರಾಂ ಅವರ ಮುಂದಾಳತ್ವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಕಾರ್ಯಗಳು, ಆಡಳಿತ ವ್ಯವಸ್ಥೆ,ಭರದಿಂದ ನಡೆಯುತ್ತಿರುವ ಯಾತ್ರಿನಿವಾಸದ ಕಾಮಗಾರಿ ಸೇರಿದಂತೆ ವಿವಿಧ ಯೋಜನೆಗಳ ಕುರಿತು ವಿವರವಾದ ವಿಚಾರ ವಿನಿಮಯ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ನಡುವೆ ಸದಾ ನಿಕಟವಾದ ಆತ್ಮೀಯ ಸಂಬಂಧವಿದ್ದು, ಧರ್ಮಸ್ಥಳದ ಆಶೀರ್ವಾದವು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮೇಲಿರಲಿದೆ ಎಂದು ಡಾ. ವೀರೇಂದ್ರ ಹೆಗ್ಗಡೆಯವರು ಹೃತ್ಪೂರ್ವಕವಾಗಿ ಆಶೀರ್ವದಿಸಿ, ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ಶುಭ ಹಾರೈಸಿದರು.

ಈ ಭೇಟಿಯ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿoಬಿ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿಗಳೂ, ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ , ಕ್ಷೇತ್ರದ ವಾಸ್ತುತಜ್ಞ ಪ್ರಮಲ್ ಕುಮಾರ್ ಕಾರ್ಕಳ, ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿಯ ಪಅಧ್ಯಕ್ಷರೂ,, ಕ್ಷೇತ್ರದ ಟ್ರಸ್ಟಿಯೂ ಆಗಿರುವ ಜಯ ವಿಕ್ರಮ ಕಲ್ಲಾಪು, ಶ್ರೀ ಕ್ಷೇತ್ರದ ಟ್ರಸ್ಟಿ ಯೂ,ಗೆಜ್ಜೆಗಿರಿ ಮೇಳದ ಪ್ರಧಾನ ಸಂಚಾಲಕರೂ ಆಗಿರುವ ನಿತ್ಯಾನಂದ ನಾವರ, ಕ್ಷೇತ್ರದ ಟ್ರಸ್ಟಿ ನಾರಾಯಣ ಪೂಜಾರಿ ಮಚ್ಚಿನ, ಶ್ರೀ ರಾಘವೇಂದ್ರ ಮಠದ ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ತಣ್ಣೀರುಪಂತ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಕನ್ಯಾಡಿ I: ಅಂತರ ಮನೆ ನಿವಾಸಿ ವಿಜಯ ಗೌಡ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya
error: Content is protected !!