25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ಪ. ಪೂ.ಕಾಲೇಜಿನಲ್ಲಿ ಪೋಷಕರ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಪೋಷಕರ ಸಭೆ ಹಾಗೂ ಶಿಕ್ಷಕ ರಕ್ಷಕ ಸಂಘದ ಆಯ್ಕೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಉಪ ಪ್ರಾಂಶುಪಾಲರಾದ ಬಿ. ಎ. ಶಮೀವುಲ್ಲಾ ಕಾಲೇಜಿನ ನಿಯಮಗಳು ಹಾಗೂ ಪೋಷಕರು ಪಾಲಿಸಬೇಕಾದ ವಿಚಾರಗಳ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ಗಣೇಶ್ ಬಿ ಶಿರ್ಲಾಲು ಪ್ರಸ್ತಾವಿಸಿ ಸ್ವಾಗತಿಸಿದರು. ಲೆಕ್ಕಶಾಸ್ತ್ರ ಉಪನ್ಯಾಸಕಿ ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಮಲ್ಲಿಕಾ ವಂದಿಸಿದರು.

ಶಿಕ್ಷಕ – ರಕ್ಷಕ ಸಂಘಕ್ಕೆ ಆಯ್ಕೆ

ಕಾಲೇಜಿನ 2026-27 ನೇ ಸಾಲಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಅಬ್ದುಲ್ ಮಜೀದ್, ಉಪಾಧ್ಯಕ್ಷರುಗಳಾಗಿ ಮೋನಪ್ಪ ಗೌಡ, ಮಲ್ಲಿಕಾ, ಕಾರ್ಯದರ್ಶಿಯಾಗಿ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಮಲ್ಲಿಕಾ ಟಿ, ಕೋಶಾಧಿಕಾರಿಯಾಗಿ ಮಂಜುಳಾ ಸದಸ್ಯರುಗಳಾಗಿ ಕುಸುಮಾವತಿ, ರವೀಂದ್ರ ನಾಯ್ಕ, ಶೋಭಾ, ವಿಮಲ, ಲಲಿತಾ, ನೇತ್ರಾವತಿ, ವಸಂತಿ, ಗಣೇಶ ಬಂಗೇರ, ಅಶ್ರಫ್ ಕರಾಯ, ಖಲಂದರ್, ಆಯ್ಕೆಯಾದರು.

Related posts

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ಲಾರಿ ಅಡ್ಡಗಟ್ಟಿ ದರೋಡೆ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

Suddi Udaya

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya
error: Content is protected !!