25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಗೆ ಕ್ಲಾರಿಯನ್ ಕಂಪೆನಿಯ ಏರಿಯಾ ಸೇಲ್ಸ್ ಮ್ಯಾನೇಜರ್ ಮಹೇಶ್ ಭೇಟಿ

ಬೆಳ್ತಂಗಡಿ: ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಒಂದೇ ತಾಯಿ ಮಕ್ಕಳಂತೆ ಇದ್ದು ಪರಸ್ಪರ ಸಹಕರಿಸಿದರೆ ಗುರಿ ಮುಟ್ಟಲು ಸಾಧ್ಯ ಎಂದು ಕ್ಲಾರಿಯನ್ ಕಂಪೆನಿಯ ಏರಿಯಾ ಸೇಲ್ಸ್ ಮ್ಯಾನೇಜರ್ ಮಹೇಶ್ ಹೇಳಿದರು.

ಅವರು ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳನ್ನು ಉದ್ದೇಶಿಸಿ ಅನುಭವವನ್ನು ಹಂಚಿಕೊಂಡರು.

ಪರಸ್ಪರ ಹೊಂದಾಣಿಕೆ ಮತ್ತು ಶಿಸ್ತು ಸಂಸ್ಥೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯ. ಗ್ರಾಹಕರನ್ನು ಆಕರ್ಷಿಸುವ ಹಾಗೂ ಗೌರವಿಸುವ ಕಲೆ ಎಲ್ಲಾ ಸಿಬ್ಬಂದಿಗಳಲ್ಲಿ ಇರಬೇಕು. ಜೀವನದಲ್ಲಿ ಅವಮಾನಗಳನ್ನು ಎದುರಿಸಿದರೆ ಮನುಷ್ಯ ಬಲಿಷ್ಠನಾಗುತ್ತಾನೆ. ಇದರಲ್ಲಿ ಮಾಲಕರ ಪ್ರೋತ್ಸಾಹ ಹಾಗೂ ಶುಭಹಾರೈಕೆ ಅತ್ಯಗತ್ಯ ಎಂದರು.

ಮಾಹಿತಿ ಕಾರ್ಯಾಗಾರದಲ್ಲಿ ಸಂಸ್ಥೆಯನ್ನುದ್ದೇಶಿಸಿ ಮಾತನಾಡಿದ ಮಹೇಶ್ ರವರಿಗೆ ವ್ಯವಸ್ಥಾಪಕ ಲ್ಯಾನ್ಸಿ ಡಿಸೋಜಾ ಸ್ಮರಣಿಕೆ ನೀಡಿ ಗೌರವಿಸಿದರು.
ಕುಮಾರಿ ಸ್ಪಂದನಾ ಸ್ವಾಗತಿಸಿ, ಪೂರ್ಣಿಮ ವಂದಿಸಿದರು. ಸಂಸ್ಥೆಯ ಸಿಬ್ಬಂದಿಗಳು,ಆಡಳಿತ ನಿರ್ದೇಶಕರಾದ ಅಲ್ಫೋನ್ಸ್ ಫ್ರಾಂಕೋ, ಅಕೌಂಟೆಂಟ್ ಶಶಿಕಲಾ, ಜೋಶಿಲ್ ಫೆರ್ನಾಂಡಿಸ್, ವರ್ಷಿತಾ, ಪವಿತ್ರ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಸೆ. 28 ರಿಂದ ಅ. 4 : ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!