ಬೆಳ್ತಂಗಡಿ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ,ಸೇವೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕೀರ್ತಿಶೇಷ ಗೋಪಾಲಕೃಷ್ಣ ಅಸ್ರಣ್ಣರ ಸಂಸ್ಮರಣಾ ಸಮಾರಂಭದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರನ್ನು ಕ್ಷೇತ್ರದ ವತಿಯಿಂದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ, ಮಾಜಿ ಸಂಸದ ನಳಿನಕುಮಾರ್ ಕಟೀಲ್, ಪ್ರದೀಪಕುಮಾರ್ ಕಲ್ಕೂರ ಮತ್ತು ಸಮಾರಂಭದ ಗಣ್ಯ ಅತಿಥಿಗಳು ಗೌರವಾಭಿನಂದನೆ ಸಲ್ಲಿಸಿದರು.











