25.7 C
ಪುತ್ತೂರು, ಬೆಳ್ತಂಗಡಿ
August 25, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ನಡ: “ಹದಿಹರೆಯದ ವಿದ್ಯಾರ್ಥಿಗಳಿಗೆ ಸಮಯ ಮತ್ತು ಪ್ರೀತಿಯನ್ನು ನೀಡಿ ಅವರ ಅವಶ್ಯಕತೆಯನ್ನು ಈಡೇರಿಸಿ ಆದರೆ ಆಡಂಬರವನ್ನು ಕೊಡಬೇಡಿ. ಮಕ್ಕಳಿಗಾಗಿ ಆಸ್ತಿ ಮಾಡಬೇಡಿ. ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ.” ಎಂದು ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಆಂಟನಿ ಟಿ.ಪಿ. ಇವರು ಪೋಷಕರಿಗೆ ಕರೆ ನೀಡಿದರು.

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪೋಷಕರ ಸಭೆಯನ್ನು ಉದ್ದೇಶಿಸಿ ಇವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿ.ವಿ. ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಪೋಷಕರಿಗೆ ಮಾರ್ಗದರ್ಶನ ಮಾಡಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಶಿಲ್ಪಾ ಡಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಹಿರಿಯ ಉಪನ್ಯಾಸಕಿ ವಸಂತಿ ಪಿ ಇವರು ಪೋಷಕರಿಗೆ ಕಿವಿ ಮಾತು ಹೇಳಿದರು.

ಇತಿಹಾಸ ಉಪನ್ಯಾಸಕರಾದ ಸವಿತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರಾವ್ಯ ಧನ್ಯವಾದವಿತ್ತರು. ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಬೆಳ್ತಂಗಡಿ: ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿ ವಿತರಣೆ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!