25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನದಲ್ಲಿ ಚಿರತೆ ಓಡಾಟ: ಜನರಲ್ಲಿ ಆತಂಕ

ಬೆಳ್ತಂಗಡಿ: ತಾಲೂಕಿನ ಮಚ್ಚಿನ ಗ್ರಾಮದ ಬಳ್ಳಮಂಜ,ಪುಂಚ ಪಾದೆ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.


ಜನನಿಬಿಡ ಪ್ರದೇಶದ ಸಮೀಪದಲ್ಲಿರುವ ಅರಣ್ಯ ಪ್ರದೇಶದಲ್ಲಿ ಚಿರತೆ ಓಡಾಡುತ್ತಿರುವುದನ್ನು ಸ್ಥಳೀಯರು ಮೊಬೈಲ್‌ ನಲ್ಲಿ ವಿಡಿಯೊ ಚಿತ್ರೀಕರಿಸಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗಿದೆ.

ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಓಡಾಟ ಕಂಡುಬರುತ್ತಿದೆ ಎಂಬ ಮಾಹಿತಿ ಸ್ಥಳೀಯರಿಂದ ಕೇಳಿಬರುತ್ತಿತ್ತು. ಇದೀಗ ಚಿರತೆಯ ಚಲನವಲನದ ದೃಶ್ಯ ಸೆರೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಜನರು ಒಂಟಿಯಾಗಿ ಸಂಚರಿಸಲು ಹಿಂದೇಟು ಹಾಕುವಂತಾಗಿದೆ. ಕೃಷಿ ಚಟುವಟಿಕೆಗಳಿಗೆ ತೆರಳುವವರು ಹಾಗೂ ಜಾನುವಾರು ಸಾಕಣೆ ಮಾಡುತ್ತಿರುವವರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತಾಗಿದೆ.

ಇದರ ನಡುವೆ ಪರಿಸರದಲ್ಲಿ ಹುಲಿ ಕಾಣಿಸಿಕೊಂಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಇದರಿಂದ ಜನರಲ್ಲಿ ಮತ್ತಷ್ಟು ಆತಂಕ ಉಂಟಾಗಿದೆ. ಆದರೆ ಅರಣ್ಯ ಇಲಾಖೆ ಈ ಭಾಗದಲ್ಲಿ ಹುಲಿ ಓಡಾಟ ಇರುವ ಸಾಧ್ಯತೆಯನ್ನು ತಳ್ಳಿಹಾಕಿದೆ. ಈ ಪರಿಸರದಲ್ಲಿ ಈ ಹಿಂದೆಯೂ ಚಿರತೆ ಓಡಾಟದ ಕುರಿತು ಮಾಹಿತಿ ಲಭಿಸಿತ್ತು ಎಂದು ಅರಣ್ಯ ಇಲಾಖೆ ತಿಳಿಸಿದೆ.

Related posts

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಸಿರಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ನಟಿ ಪ್ರೇಮಾ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!