25.7 C
ಪುತ್ತೂರು, ಬೆಳ್ತಂಗಡಿ
August 25, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿ ಸೇವಾ ಸಾಧನ ವತಿಯಿಂದ ಮಾದಕ ವಸ್ತು ಜಾಗೃತಿ ಹಾಗೂ ಡ್ರ್ಯಾಗನ್ ಫ್ರೂಟ್ಸ್ ವಿತರಣೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿ ಸೇವಾ ಸಾಧನ 2026-27 ಇದರ ವತಿಯಿಂದ ಮಾದಕ ವಸ್ತು ಜಾಗೃತಿ ಹಾಗೂ ಲಯನ್ ಗೋಪಾಲಕೃಷ್ಣ ಕಾಂಚೋಡು ಇವರ ಪ್ರಾಯೋಜಕತ್ವದಲ್ಲಿ ಡ್ರ್ಯಾಗನ್ ಫ್ರೂಟ್ಸ್ ವಿತರಣೆ ಕಾರ್ಯಕ್ರಮವು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕನ್ಯಾಡಿ ll ಇಲ್ಲಿ ಜರುಗಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ನಂದ ವಹಿಸಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಘುರಾಮ ಶೆಟ್ಟಿ ಇವರು ಮಾದಕ ವಸ್ತು ಸೇವನೆಯಿಂದ ಆಗುವ ಪರಿಣಾಮಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ನಿವೃತ್ತ ಯೋಧರು ಪ್ರಗತಿಪರ ಕೃಷಿಕ ಲಯನ್ ಗೋಪಾಲಕೃಷ್ಣ ಕಾಂಚೋಡು ಇವರು ಸಾವಯವ ಕೃಷಿಯ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ನಿವೃತ್ತ ಯೋಧರಾದ ಅರುಣ್ ಶೆಟ್ಟಿ, ಲಯನ್ಸ್ ಕ್ಲಬ್ ಕೋಶಾಧಿಕಾರಿ ನಾಣ್ಯಪ್ಪ ನಾಯ್ಕ, ಲಯನ್ ಪ್ರಭಾಕರ ಗೌಡ ಬೊಲ್ಮಾ, ಲಯನ್ ರಾಜೇಂದ್ರ ಅಜ್ರಿ, ಲಯನ್ ಭುಜಬಲಿ ಧರ್ಮಸ್ಥಳ, ಲಿಯೋ ಕ್ಲಬ್ ಅಧ್ಯಕ್ಷರಾದ ಅಭಿಜ್ಞಾ ಬೊಲ್ಮಾ, ಲಿಯೋ ಕೋಶಾಧಿಕಾರಿ ರೋಹನ್ ಪವಾರ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಶಾಲಾ ಶಿಕ್ಷಕಿ ತೇಜಸ್ವಿನಿ ವಂದನಾರ್ಪಣೆ ಗೈದರು. ಶಾಲಾ ಶಿಕ್ಷಕಿ ಶ್ರೀಮತಿ ವಿಜಯಾ ಕಾರ್ಯಕ್ರಮವನ್ನು ನಿರ್ವಹಿಸಿದರು.

Related posts

ಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ನ 9ನೇ ಸ್ವಚ್ಛ ಭಾರತ್ ಸ್ವಚ್ಛತಾ ಕಾರ್ಯಕ್ರಮ: ಮುಂದಿನ ಪೀಳಿಗೆಗೆ ಅತ್ಯುತ್ತಮ ಕೊಡುಗೆ ಎಂದರೆ ಸ್ವಚ್ಛ ಪರಿಸರ ಮಾತ್ರ: ಡಾ. ಎಸ್.ಆರ್. ಹರೀಶ್ ಆಚಾರ್ಯ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಅಗ್ನಿವೀರ್ ಜಿಡಿ ಹುದ್ದೆಗೆ ಆಯ್ಕೆಯಾದ ಗುರುಕಿರಣ್ ರವರಿಗೆ ಶ್ರೀ ರಾಮ್ ಫ್ರೆಂಡ್ಸ್ ಬಾಜಾರು ವತಿಯಿಂದ ಸನ್ಮಾನ

Suddi Udaya
error: Content is protected !!