August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ವ್ಯವಹಾರ ನಡೆಸಿ ಸಾಧನೆ ಮಾಡಿರುವ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಹಾಗೂ ಮುಖ್ಯಕಾರ್ಯನಿರ್ವಹಣಧಿಕಾರಿ ಮಮತಾ ಜಿ ಪ್ರಶಸ್ತಿ ಸ್ವೀಕರಿಸಿದರು..

ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು. ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಆಡಳಿತ ಮಂಡಳಿ ಸದಸ್ಯರಾದ ಭಾಸ್ಕರ್ ಎಸ್ ಕೋಟ್ಯಾನ್, ಶಶಿಕುಮಾರ್ ರೈ ಬಿ,ಡಾ ದೇವಿಪ್ರಸಾದ್ ಶೆಟ್ಟಿ, ಸದಾಶಿವ ಉಳ್ಳಾಲ್,ಎಂ ಮಹೇಶ್ ಹೆಗ್ಡೆ, ಎಸ್ ಎನ್ ಮನ್ಮಥ ಹಾಗೂ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್ ಎನ್ ರಮೇಶ್ ಉಪಸ್ಥಿತರಿದ್ದರು.

ದ ಕ ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಸಿ ಇ ಒ ಕಿಶೋರ್ ಹಾಗೂ ಸಂಘದ ಲೆಕ್ಕಿಗ ಶ್ರೀಮತಿ ನಿಶ್ಮಿತಾ ಕೆ, ಶಾಖಾ ವ್ಯವಸ್ಥಾಪಕರಾದ ಶ್ರೀಮತಿ ಅಕ್ಷತಾ ಹಾಗೂ ಕು.ಶ್ರುತಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

“ಕಾಶಿ ಸದನ’ ವಸತಿ ಯೋಜನೆಯ ಫಲಾನುಭವಿಗಳಿಗೆ ಧನಸಹಾಯದ ಚೆಕ್ ಹಸ್ತಾಂತರ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya
error: Content is protected !!