25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರುಡ್‌ಸೆಟ್ ತರಬೇತಿದಾರರಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

ಉಜಿರೆ: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ನಡೆಯುತ್ತಿರುವ ಅಸಿಸ್ಟೆಂಟ್ ಬುಕ್‌ಕೀಪರ್ ಹಾಗೂ ವಸ್ತ್ರಚಿತ್ರಕಲಾ–ಲಘು ಉದ್ಯಮಿ ತರಬೇತಿಯ ಶಿಬಿರಾರ್ಥಿಗಳು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು.

ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಆಧುನಿಕ ಜಗತ್ತಿನಲ್ಲಿ ನಿರಂತರವಾಗಿ ಬದಲಾವಣೆಗಳು ನಡೆಯುತ್ತಿದ್ದು, ಅದರೊಂದಿಗೆ ನಾವು ಕೂಡ ಬದಲಾಗುತ್ತಾ ಬೆಳೆಯಬೇಕು. ಹೊಸ ತಂತ್ರಜ್ಞಾನ, ಹೊಸ ಆಲೋಚನೆ ಮತ್ತು ಹೊಸತನವನ್ನು ಉದ್ಯಮದಲ್ಲಿ ಅಳವಡಿಸಿಕೊಳ್ಳಬೇಕು. ಯಾವುದೇ ವ್ಯವಹಾರವನ್ನು ಪ್ರಾಮಾಣಿಕತೆ ಹಾಗೂ ಗುಣಮಟ್ಟದೊಂದಿಗೆ ನಡೆಸಿದಾಗ ಯಶಸ್ಸು ಸಾಧ್ಯ ಎಂದು ತಿಳಿಸಿದರು.

ರುಡ್‌ಸೆಟ್ ಸಂಸ್ಥೆಯಲ್ಲಿ ಪಡೆಯುತ್ತಿರುವ ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಸ್ವಉದ್ಯೋಗದ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಕಲಿತ ಕೌಶಲ್ಯವನ್ನು ಕೇವಲ ಉದ್ಯೋಗಕ್ಕಾಗಿ ಬಳಸದೆ, ಇತರರಿಗೂ ಉದ್ಯೋಗಾವಕಾಶ ಕಲ್ಪಿಸುವ ಉದ್ಯಮಿಗಳಾಗಿ ಬೆಳೆಯಬೇಕು ಎಂದು ಅವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಸುನಿಲ್ ಜಿ. ನಾಯಕ್, ಹಿರಿಯ ಉಪನ್ಯಾಸಕರಾದ ಕರುಣಾಕರ ಜೈನ್, ಅತಿಥಿ ಉಪನ್ಯಾಸಕರಾದ ಸಚಿನ್ ಹಾಗೂ ಶ್ರೀಮತಿ ರಶ್ಮಿ ರಾಘವೇಂದ್ರ, ಸುರೇಶ ಗೌಡ ಉಪಸ್ಥಿತರಿದ್ದರು.

Related posts

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ದಲಿತ ಮುಖಂಡ ಚಂದು ಎಲ್ ರವರ ಪ್ರಥಮ ವರ್ಷದ ಪುಣ್ಯ ಸ್ಮರಣಾ ಕಾರ್ಯಕ್ರಮ

Suddi Udaya

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya
error: Content is protected !!