25.7 C
ಪುತ್ತೂರು, ಬೆಳ್ತಂಗಡಿ
August 25, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ನಡ: “ಹದಿಹರೆಯದ ವಿದ್ಯಾರ್ಥಿಗಳಿಗೆ ಸಮಯ ಮತ್ತು ಪ್ರೀತಿಯನ್ನು ನೀಡಿ ಅವರ ಅವಶ್ಯಕತೆಯನ್ನು ಈಡೇರಿಸಿ ಆದರೆ ಆಡಂಬರವನ್ನು ಕೊಡಬೇಡಿ. ಮಕ್ಕಳಿಗಾಗಿ ಆಸ್ತಿ ಮಾಡಬೇಡಿ. ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ.” ಎಂದು ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಆಂಟನಿ ಟಿ.ಪಿ. ಇವರು ಪೋಷಕರಿಗೆ ಕರೆ ನೀಡಿದರು.

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪೋಷಕರ ಸಭೆಯನ್ನು ಉದ್ದೇಶಿಸಿ ಇವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿ.ವಿ. ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಪೋಷಕರಿಗೆ ಮಾರ್ಗದರ್ಶನ ಮಾಡಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಶಿಲ್ಪಾ ಡಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಹಿರಿಯ ಉಪನ್ಯಾಸಕಿ ವಸಂತಿ ಪಿ ಇವರು ಪೋಷಕರಿಗೆ ಕಿವಿ ಮಾತು ಹೇಳಿದರು.

ಇತಿಹಾಸ ಉಪನ್ಯಾಸಕರಾದ ಸವಿತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರಾವ್ಯ ಧನ್ಯವಾದವಿತ್ತರು. ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ಬ್ರೈಟ್ ಹೊರೈಝನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಕೃಷಿಕ ಸವಣಾಲು ವಸಂತ ಪೂಜಾರಿ ನಿಧನ

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

Suddi Udaya
error: Content is protected !!