25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿಭಾಗ ಹಾಗೂ ಸರಸ್ವತಿ ಪ್ರೌಢಶಾಲೆ ಸಹಯೋಗದಲ್ಲಿ “ಕೆಸರ್ದ ಗೊಬ್ಬು

ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ವಿಭಾಗ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಂಡಾಜೆ ಇವರ ಸಹಯೋಗದಲ್ಲಿ ಮುಂಡಾಜೆಯ ಅಗರಿ ಗದ್ದೆಯಲ್ಲಿ “ಕೆಸರ್ದ ಗೊಬ್ಬು” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ನಾರಾಯಣಶೆಟ್ಟಿ ಅಗರಿ ಉದ್ಘಾಟಿಸಿದರು. ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ಮಾತನಾಡಿ, ‘ಗ್ರಾಮೀಣ ಬದುಕಿನ ಸಂಸ್ಕೃತಿ-ಸೊಗಡನ್ನು ಉಳಿಸಿ ಬೆಳೆಸಬೇಕು. ಇಂದಿನ ಜನಾಂಗಕ್ಕೆ ಗ್ರಾಮೀಣ ಬದುಕಿನ ಅರಿವಾಗಬೇಕು’ ಎಂದರು. ಕಾರ್ಯಕ್ರಮದಲ್ಲಿ ಊರಿನ ಪ್ರಮುಖರಾದ ದಾಮೋದರ್ ಶೆಟ್ಟಿ ಅಗರಿ, ಕಾಲೇಜಿನ ಪ್ರಾಂಶುಪಾಲೆ ಗೀತಾ, ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಚಂದ್ರಮತಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೇಜಿ ನಾಟಿಯ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ವಿದ್ಯಾರ್ಥಿಗಳಿಗೆ ಕೆಸರಿನ ಗದ್ದೆಯಲ್ಲಿ ವಿವಿಧ ಆಟೋಟಗಳನ್ನು ಏರ್ಪಡಿಸಿ, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮವನ್ನು ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕರಾದ ಪುರುಷೋತ್ತಮ ಶೆಟ್ಟಿ ನಿರೂಪಿಸಿ, ನಮಿತಾ ಕೆ ಆರ್ ವಂದಿಸಿದರು.

Related posts

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!