August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ವ್ಯವಹಾರ ನಡೆಸಿ ಸಾಧನೆ ಮಾಡಿರುವ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಹಾಗೂ ಮುಖ್ಯಕಾರ್ಯನಿರ್ವಹಣಧಿಕಾರಿ ಮಮತಾ ಜಿ ಪ್ರಶಸ್ತಿ ಸ್ವೀಕರಿಸಿದರು..

ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು. ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಆಡಳಿತ ಮಂಡಳಿ ಸದಸ್ಯರಾದ ಭಾಸ್ಕರ್ ಎಸ್ ಕೋಟ್ಯಾನ್, ಶಶಿಕುಮಾರ್ ರೈ ಬಿ,ಡಾ ದೇವಿಪ್ರಸಾದ್ ಶೆಟ್ಟಿ, ಸದಾಶಿವ ಉಳ್ಳಾಲ್,ಎಂ ಮಹೇಶ್ ಹೆಗ್ಡೆ, ಎಸ್ ಎನ್ ಮನ್ಮಥ ಹಾಗೂ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್ ಎನ್ ರಮೇಶ್ ಉಪಸ್ಥಿತರಿದ್ದರು.

ದ ಕ ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಸಿ ಇ ಒ ಕಿಶೋರ್ ಹಾಗೂ ಸಂಘದ ಲೆಕ್ಕಿಗ ಶ್ರೀಮತಿ ನಿಶ್ಮಿತಾ ಕೆ, ಶಾಖಾ ವ್ಯವಸ್ಥಾಪಕರಾದ ಶ್ರೀಮತಿ ಅಕ್ಷತಾ ಹಾಗೂ ಕು.ಶ್ರುತಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya
error: Content is protected !!