25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಗೆ ಕ್ಲಾರಿಯನ್ ಕಂಪೆನಿಯ ಏರಿಯಾ ಸೇಲ್ಸ್ ಮ್ಯಾನೇಜರ್ ಮಹೇಶ್ ಭೇಟಿ

ಬೆಳ್ತಂಗಡಿ: ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಒಂದೇ ತಾಯಿ ಮಕ್ಕಳಂತೆ ಇದ್ದು ಪರಸ್ಪರ ಸಹಕರಿಸಿದರೆ ಗುರಿ ಮುಟ್ಟಲು ಸಾಧ್ಯ ಎಂದು ಕ್ಲಾರಿಯನ್ ಕಂಪೆನಿಯ ಏರಿಯಾ ಸೇಲ್ಸ್ ಮ್ಯಾನೇಜರ್ ಮಹೇಶ್ ಹೇಳಿದರು.

ಅವರು ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳನ್ನು ಉದ್ದೇಶಿಸಿ ಅನುಭವವನ್ನು ಹಂಚಿಕೊಂಡರು.

ಪರಸ್ಪರ ಹೊಂದಾಣಿಕೆ ಮತ್ತು ಶಿಸ್ತು ಸಂಸ್ಥೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯ. ಗ್ರಾಹಕರನ್ನು ಆಕರ್ಷಿಸುವ ಹಾಗೂ ಗೌರವಿಸುವ ಕಲೆ ಎಲ್ಲಾ ಸಿಬ್ಬಂದಿಗಳಲ್ಲಿ ಇರಬೇಕು. ಜೀವನದಲ್ಲಿ ಅವಮಾನಗಳನ್ನು ಎದುರಿಸಿದರೆ ಮನುಷ್ಯ ಬಲಿಷ್ಠನಾಗುತ್ತಾನೆ. ಇದರಲ್ಲಿ ಮಾಲಕರ ಪ್ರೋತ್ಸಾಹ ಹಾಗೂ ಶುಭಹಾರೈಕೆ ಅತ್ಯಗತ್ಯ ಎಂದರು.

ಮಾಹಿತಿ ಕಾರ್ಯಾಗಾರದಲ್ಲಿ ಸಂಸ್ಥೆಯನ್ನುದ್ದೇಶಿಸಿ ಮಾತನಾಡಿದ ಮಹೇಶ್ ರವರಿಗೆ ವ್ಯವಸ್ಥಾಪಕ ಲ್ಯಾನ್ಸಿ ಡಿಸೋಜಾ ಸ್ಮರಣಿಕೆ ನೀಡಿ ಗೌರವಿಸಿದರು.
ಕುಮಾರಿ ಸ್ಪಂದನಾ ಸ್ವಾಗತಿಸಿ, ಪೂರ್ಣಿಮ ವಂದಿಸಿದರು. ಸಂಸ್ಥೆಯ ಸಿಬ್ಬಂದಿಗಳು,ಆಡಳಿತ ನಿರ್ದೇಶಕರಾದ ಅಲ್ಫೋನ್ಸ್ ಫ್ರಾಂಕೋ, ಅಕೌಂಟೆಂಟ್ ಶಶಿಕಲಾ, ಜೋಶಿಲ್ ಫೆರ್ನಾಂಡಿಸ್, ವರ್ಷಿತಾ, ಪವಿತ್ರ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!