25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಎರಡೂ ಜನರೇಟರ್ ಇದ್ದೂ ಯಾವುದೇ ಪ್ರಯೋಜನಕ್ಕಿಲ್ಲ: ಜನರು ಅಗತ್ಯ ಕೆಲಸಕ್ಕಾಗಿ ಕಾದು ವಾಪಸ್ ಹೋಗಬೇಕಾದ ಪರಿಸ್ಥಿತಿ

ಬೆಳ್ತಂಗಡಿ ತಾಲೂಕು ಕಚೇರಿ ದಿನನಿತ್ಯ ಜನರಿಂದ ತುಂಬಿ ತುಳುಕುತ್ತದೆ. ಆದರೆ ಇಲ್ಲಿ ವಿದ್ಯುತ್ ಪೂರೈಕೆ ಕಡಿತಗೊಂಡರೆ ಪರ್ಯಾಯ ವ್ಯವಸ್ಥೆ ಇಲ್ಲ. ಇರುವ ಎರಡೂ ಜನರೇಟರ್ ಯಾವುದೇ ಪ್ರಯೋಜನಕ್ಕಿಲ್ಲ. ಜನರು ತಮ್ಮ ಅಗತ್ಯ ಕೆಲಸಕ್ಕಾಗಿ ಕಾದು ಕಾದು ವಾಪಸ್ ಹೋಗಬೇಕಾದ ಪರಿಸ್ಥಿತಿ ಇದೆ.

ಬೆಳ್ತಂಗಡಿ ತಾಲೂಕು ಕಚೇರಿಯ ನೂತನ ಕಟ್ಟಡ 2018 ರಲ್ಲಿ ಉದ್ಘಾಟನೆಗೊಂಡು ಕೇವಲ 8 ವರ್ಷಗಳಾಯಿತು ಅಷ್ಟೇ. ಉದ್ಘಾಟನಾ ಸಂದರ್ಭದಲ್ಲಿ ಎರಡು ಜನರೇಟರ್ ಗಳಿತ್ತು. ಈಗಲೂ ಇದೆಯಾದರೂ ಎರಡೂ ಜನರೇಟರ್ ಗಳು ಯಾವುದೇ ಉಪಯೋಗಕ್ಕೆ ಬಾರದೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ವಿದ್ಯುತ್ ಕೈಕೊಟ್ಟರೆ ಕಂಪ್ಯೂಟರ್ ಗಳು ಸಂಪೂರ್ಣ ಬಂದ್ ಆಗುತ್ತದೆ. ಪರ್ಯಾಯ ವ್ಯವಸ್ಥೆಯಂತೂ ಯಾವುದೂ ಇಲ್ಲ. ಸಿಬ್ಬಂದಿಗಳು ಜನರಿಂದ ಬೈಸಿಕೊಂಡು ಸುಮ್ಮನೆ ಇರಬೇಕಾಷ್ಟೇ. ಕಚೇರಿ ವೆಚ್ಚದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಸರ್ಕಾರ ಬಿಡುಗಡೆಗೊಳಿಸಿದರೂ ಪ್ರಯೋಜನವಿಲ್ಲ.

ಐದಾರು ವರ್ಷಗಳಿಂದ ಸತತವಾಗಿ ಜನರೇಟರ್ ಗಾಳಿ , ಮಳೆ , ಬಿಸಿಲಿಗೆ ಮೈಯೊಡ್ಡಿ ತಾಲೂಕು ಕಚೇರಿಯ ಬದಿಯಲ್ಲಿದ್ದರೂ ಇಲ್ಲಿನ ತಹಶೀಲ್ದಾರರುಗಳು ಮಾತ್ರ ತಮಗೂ , ಜನರೇಟರ್ ಗೂ ಯಾವುದೇ ರೀತಿಯ ಸಂಬಂಧ ಇಲ್ಲದವರಂತೆ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ. ಇನ್ನಾದರೂ ಲಕ್ಷಾಂತರ ರೂಪಾಯಿ ಮೌಲ್ಯದ ಎರಡೂ ಜನರೇಟರ್ ಗಳು ಜನರ ಉಪಯೋಗಕ್ಕೆ ಲಭ್ಯವಾಗಲಿ , ಅಥವಾ ಎರಡೂ ಜನರೇಟರ್ ಗಳು ತುಕ್ಕು ಹಿಡಿದು ಗುಜರಿ ಅಂಗಡಿ ಸೇರುವುದರಲ್ಲಿ ಯಾವುದೇ ಸಂಶಯವಿಲ್ಲ.

Related posts

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಆ.18: ದೇಶವ್ಯಾಪಿ ಕಾರ್ಮಿಕ ಪ್ರತಿಭಟನೆ: ಬೆಳ್ತಂಗಡಿ ತಾಲೂಕಿನ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು: ಅನಿಲ್ ಕುಮಾರ್ ಯು

Suddi Udaya

ಬಳಂಜ ಒಕ್ಕೂಟದ ವತಿಯಿಂದ ಬಳಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!