August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿಯಲ್ಲಿ ಉಚಿತ ನೇತ್ರಾ ಚಿಕಿತ್ಸಾ ಶಿಬಿರ

ನಾರಾವಿ: ನಾರಾವಿಯ ಧರ್ಮಶ್ರೀ ಸಭಾಭವನದಲ್ಲಿ 15ನೇ ವರ್ಷದ ಶ್ರೀ ಅನಂತನೋಂಪಿ ಆರಾಧನಾ ಪೂಜೆಯ ಪ್ರಯುಕ್ತ ಶ್ರೀ ನೋಂಪಿ ವ್ರತಧಾರಿಗಳ ಮುಂದಾಳತ್ವದಲ್ಲಿ ಹಾಗೂ ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಸ್ಟ್ ಕಣ್ಣಿನ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಉಚಿತ ನೇತ್ರಾ ಚಿಕಿತ್ಸಾ ಶಿಬಿರವು ಜರುಗಿತು.

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರು ಶಿಬಿರವನ್ನು ಉದ್ಘಾಟಿಸಿ ಪಂಚೇಂದ್ರಿಯಗಳಲ್ಲಿ ಅತಿ ಮುಖ್ಯವಾದ ಕಣ್ಣಿನ ದೋಷಗಳನ್ನು ಆರಂಭದಲ್ಲೇ ಗುರುತಿಸಿ ಸರಿಯಾದ ಚಿಕಿತ್ಸೆ ಪಡೆಯುವುದು ಅತೀ ಮುಖ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾವಿಯ ಅನಂತೇಶ್ವರ ರೂರಲ್ ಕ್ಲಿನಿಕ್ ವೈದ್ಯ ಡಾ| ಶೀತಲ್ ಕುಮಾರ್ ರವರು ಶಿಬಿರದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದರು.

ವೇದಿಕೆಯಲ್ಲಿ ಶಿಬಿರದ ಸಂಯೋಜಕರಾದ ಶಿಶುಪಾಲ್ ಜೈನ್ , ನಾರಾವಿ ಗ್ರಾ.ಪಂ. ಮಾಜಿ ಅಧ್ಯಕ್ಷ ರಾಜವರ್ಮ ಜೈನ್, ದಿಗಂಬರ ಜೈನ ಯುವ ಜನ ಸಂಘದ ಅಧ್ಯಕ್ಷ ಜಿನೇಂದ್ರ ಜೈನ್ , ಮಾನಸಿ ಮಹಿಳಾ ಸಂಘದ ಅಧ್ಯಕ್ಷೆ ಸುಮಿತ್ರಾ ಸನ್ಮತ್ ಕುಮಾರ್, ಪ್ರಸಾದ್ ನೇತ್ರಾಲಯದ ವೈದ್ಯಾಧಿಕಾರಿ ಡಾ| ಸಂಜನಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ಮಧುಕರ್ ಕನ್ನಾರ್ ಉಪಸ್ಥಿತರಿದ್ದರು.

ಸಂತೋಷ್ ಕೆಲ್ಲರವರು ಸ್ವಾಗತಿಸಿ, ಸುಮಿತ್ರಾ ವಂದಿಸಿದರು. ಶಿಕ್ಷಕರಾದ ನಿರಂಜನ್ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ನಾವೂರು: ಯಮುನ ಅಮ್ಮು ಮುಗೇರರ ಮನೆಗೆ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಉದ್ಘಾಟನೆ’

Suddi Udaya

ಮುಂಡಾಜೆ : ಬಂಡಿಮಠ ನಿವಾಸಿ ಪುರಲ್ಲ ನಿಧನ

Suddi Udaya
error: Content is protected !!