August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರಿನಲ್ಲಿ ಮೊಬೈಲ್ ಟವರ್‌ನಿಂದ 60 ಲೀಟರ್ ಡೀಸೆಲ್ ಕಳವು :ಮೂವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಬಂದಾರು ಗ್ರಾಮದ ಇಂಡಸ್ ಮೊಬೈಲ್ ಟವರ್‌ನಿಂದ ಸುಮಾರು 60 ಲೀಟರ್ ಡೀಸೆಲ್ ಕಳವು ಮಾಡಿದ ಆರೋಪದ ಮೇಲೆ ಮೂವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂಡಸ್ ಮೊಬೈಲ್ ಟವರ್ ಕಂಪನಿಯಲ್ಲಿ ಸೆಕ್ಯುರಿಟಿ ಸೂಪರ್‌ವೈಸರ್ ಆಗಿ ಕೆಲಸ ಮಾಡುತ್ತಿರುವ ದಿನೇಶ್ ಕೆ(53) ಅವರು ನೀಡಿದ ದೂರಿನ ಆಧಾರದಲ್ಲಿ ಆ.24 ರಂದು ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 303(2)ರ ಅಡಿಯಲ್ಲಿ ಧೀಕ್ಷಣ್ ಹಾಗೂ ಇಬ್ಬರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಆಗಸ್ಟ್ 23ರಂದು ರಾತ್ರಿ ಸುಮಾರು 2 ಗಂಟೆಗೆ ಬಂದಾರು ಗ್ರಾಮದ ಟವರ್ ಬಳಿ ತಾಂತ್ರಿಕ ಸಿಬ್ಬಂದಿ ದೀಕ್ಷಿತ್ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ರಸ್ತೆಯ ಬಳಿ ನಿಲ್ಲಿಸಿದ್ದ KA-20-D-7442 ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಎರಡು ಕ್ಯಾನ್‌ಗಳಲ್ಲಿ ಡೀಸೆಲ್ ತುಂಬಿಸುತ್ತಿರುವುದು ಕಂಡುಬಂದಿದೆ. ಟಾರ್ಚ್ ಬೆಳಕಿನಲ್ಲಿ ಅವರನ್ನು ಗಮನಿಸಿ ಕಾರಿನ ಬಳಿ ತೆರಳುತ್ತಿದ್ದಂತೆ, ಮೂವರು ಡೀಸೆಲ್ ಕ್ಯಾನ್‌ಗಳ ಸಮೇತ ಕಾರಿನಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಪರಾರಿಯಾದವರಲ್ಲಿ ಇದೇ ಟವರ್‌ನಲ್ಲಿ ಈ ಹಿಂದೆ ಟೆಕ್ನಿಷಿಯನ್ ಆಗಿ ಕೆಲಸ ಮಾಡಿದ್ದ ಧೀಕ್ಷಣ್ ಎಂಬಾತನನ್ನು ಗುರುತಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಕಳವಾಗಿರುವ ಸುಮಾರು 60 ಲೀಟರ್ ಡೀಸೆಲ್‌ನ ಮೌಲ್ಯ ಸುಮಾರು 6 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ.

Related posts

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಎಕ್ಸೆಲ್ ನಲ್ಲಿ ಮಾರ್ಚ್ 18 ರಿಂದ ನೀಟ್, ಜೆಇಇ , ಸಿಇಟಿ ಕ್ರ್ಯಾಶ್ ಕೋರ್ಸ್

Suddi Udaya

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!