August 25, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ತಂಡದಿಂದ ಬಜಿಲ ಶಾಲೆಯಲ್ಲಿ ಶ್ರಮದಾನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಬಜಿಲ ಒಕ್ಕೂಟ ಹಾಗೂ ಸ್ವಸಹಾಯ ಸಂಘಗಳ ಸದಸ್ಯರ ಸಹಕಾರದೊಂದಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಜಿಲದಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶ್ರಮದಾನದಲ್ಲಿ ಶಾಲಾ ಆವರಣದ ಸುತ್ತಮುತ್ತ ಬೆಳೆದಿದ್ದ ಕಳೆ, ಪೊದೆ ಹಾಗೂ ಅನಗತ್ಯ ಗಿಡಗಳನ್ನು ತೆರವುಗೊಳಿಸಿ ಶಾಲಾ ಪರಿಸರವನ್ನು ಸ್ವಚ್ಛ ಹಾಗೂ ಸುಂದರಗೊಳಿಸಲಾಯಿತು. ಜೊತೆಗೆ ಶಾಲೆಯ ಕೈತೋಟದಲ್ಲಿ ವಿವಿಧ ಜಾತಿಯ ಬಾಳೆ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡಲಾಯಿತು.

ಶ್ರಮದಾನ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಹರೀಶ್, ಬಜಿಲ ಒಕ್ಕೂಟದ ಅಧ್ಯಕ್ಷರಾದ ಲಿಂಗಪ್ಪ ಗೌಡ, ಸೇವಾ ಪ್ರತಿನಿಧಿ ಶ್ರೀಮತಿ ಕುಸುಮಾವತಿ, ಶಾಲಾ ಪೋಷಕರಾದ ಮೋಹನದಾಸ ಗೌಡ ಹಾಗೂ ಬಾಲಕೃಷ್ಣ ಗೌಡ ಅಡ್ಡಾರು ಸೇರಿದಂತೆ ಸ್ವಸಹಾಯ ಸಂಘಗಳ 25ಕ್ಕೂ ಹೆಚ್ಚು ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು.
ಸದಸ್ಯರ ಸಾಮೂಹಿಕ ಶ್ರಮ ಮತ್ತು ಸಹಕಾರದಿಂದ ಶಾಲಾ ಪರಿಸರ ಮತ್ತಷ್ಟು ಸ್ವಚ್ಛ, ಹಸಿರು ಹಾಗೂ ಆಕರ್ಷಕವಾಗಿ ರೂಪುಗೊಂಡಿತು.

Related posts

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ನಾಳ: ಗೋವಿಂದೂರು ಬಳಿ ವಿಎಂ ನರ್ಸರಿ ಉದ್ಘಾಟನೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya
error: Content is protected !!