ಬೆಳ್ತಂಗಡಿ: ವಿದ್ಯಾರ್ಥಿಗಳು ಸಮಯದ ಮೌಲ್ಯವನ್ನು ಅರಿತು ಶಿಸ್ತುಬದ್ಧವಾಗಿ ವಿದ್ಯಾಭ್ಯಾಸದತ್ತ ಗಮನ ಹರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಸಮಯಪಾಲನೆ ಹಾಗೂ ಶಿಸ್ತು ಜೀವನದಲ್ಲಿ ಯಶಸ್ಸು ಸಾಧಿಸಲು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸಹನಾಶ್ರೀ ಫೌಂಡೇಶನ್ (ರಿ) ಅಧ್ಯಕ್ಷ ರಾಜೇಶ್ ಪುದುಶೇರಿ ಹೇಳಿದರು.

ಬೆಳ್ತಂಗಡಿ ತಾಲ್ಲೂಕಿನ ಇಂದಬೆಟ್ಟು, ಬೆದ್ರಬೆಟ್ಟು ಹಾಗೂ ಎರ್ಮಲ ಮದರಸ ವಿದ್ಯಾರ್ಥಿಗಳಿಗೆ ಸಹನಾಶ್ರೀ ಫೌಂಡೇಶನ್ (ರಿ) ವತಿಯಿಂದ ಗಡಿಯಾರಗಳನ್ನು ವಿತರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಹನಾಶ್ರೀ ಫೌಂಡೇಶನ್ ನಿರಂತರವಾಗಿ ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸಂದರ್ಭದಲ್ಲಿ ನೆರವು ನೀಡುವುದು ಹಾಗೂ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವುದು ಸಂಸ್ಥೆಯ ಪ್ರಮುಖ ಆಶಯವಾಗಿದೆ ಎಂದು ರಾಜೇಶ್ ಪುದುಶೇರಿ ತಿಳಿಸಿದರು.

ಈ ಸಂದರ್ಭದಲ್ಲಿ ಹಸನ್ ಎರ್ಮಲ, ಮೊಹಮ್ಮದ್ ಎರ್ಮಲ, ನವೀನ್ ಕುಮಾರ್ ಬಂಗಾಡಿ, ಪ್ರದೀಪ್ ಬಂಗಾಡಿ ಹಾಗೂ ಪುನೀತ್ ಬಂಗಾಡಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ಗಡಿಯಾರಗಳನ್ನು ವಿತರಿಸುವ ಮೂಲಕ ಸಮಯಪಾಲನೆಯ ಮಹತ್ವವನ್ನು ತಿಳಿಸುವ ಪ್ರಯತ್ನ ಮಾಡಿರುವ ಸಹನಾಶ್ರೀ ಫೌಂಡೇಶನ್ನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.











