August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ ರವರು ‘ಬಸವಶ್ರೀ’ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಬೆಂಗಳೂರಿನ ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ ಬೆಳ್ಳಿಹಬ್ಬದ ಸಂಭ್ರಮದ ಅಂಗವಾಗಿ ನೀಡುವ ‘ಬಸವಶ್ರೀ’ ಪ್ರಶಸ್ತಿಗೆ ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ ಸೂಟರ್‌ಪೇಟೆ ಅವರನ್ನು ಆಯ್ಕೆ ಮಾಡಿದೆ.

ಮಾಧ್ಯಮ ಕ್ಷೇತ್ರದಲ್ಲಿ 32 ವರ್ಷಗಳಿಂದ ಕ್ರೀಡಾ ಬರವಣಿಗೆ, ಕ್ರೀಡಾ ಅಂಕಣಕಾರರಾಗಿ ಗುರುತಿಸಿಕೊಂಡಿರುವ ಇವರು ಈವರೆಗೆ 4,500ಕ್ಕೂ ಅಧಿಕ ಕ್ರೀಡಾ ಲೇಖನ, ಅಂಕಣ ಬರಹ ಬರೆದಿದ್ದು, ಜಿಲ್ಲೆ, ರಾಜ್ಯ, ಅಂತಾರಾಜ್ಯಮಟ್ಟದ ವಿವಿಧ ಕನ್ನಡ ದಿನಪತ್ರಿಕೆ, ವಾರಪತ್ರಿಕೆ, ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಕ್ರೀಡಾ ಕ್ಷೇತ್ರದ ಬೆಳವಣಿಗೆ, ಸಾಧನೆ, ವಿವಿಧ ಕ್ರೀಡಾ ವಿಷಯಗಳ ಕುರಿತು ವಿಮರ್ಶಾತ್ಮಕ ಮತ್ತು ವಿಶ್ಲೇಷಣಾತ್ಮಕ ಬರಹಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ಜಗದೀಶ್ಚಂದ್ರ ಅಂಚನ್ ಕನ್ನಡ ನಾಡಿಗೆ ಸಲ್ಲಿಸುತ್ತಿರುವ ಅನುಪಮ ಕ್ರೀಡಾ ಸಾಹಿತ್ಯ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಜೆಎಸ್‌ಎಸ್ ಸಭಾಂಗಣದಲ್ಲಿ ಆ.29ರಂದು ನಡೆಯಲಿರುವ ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಬೆಳ್ಳಿಹಬ್ಬದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಕಾರ್ಯದರ್ಶಿ ಎಚ್.ಸೋಮಶೇಖರ್ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Suddi Udaya

ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು ಸಚಿವರಿಗೆ ಅಭಿನಂದನೆ

Suddi Udaya

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya
error: Content is protected !!