25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರಿನಲ್ಲಿ ಮೊಬೈಲ್ ಟವರ್‌ನಿಂದ 60 ಲೀಟರ್ ಡೀಸೆಲ್ ಕಳವು :ಮೂವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಬಂದಾರು ಗ್ರಾಮದ ಇಂಡಸ್ ಮೊಬೈಲ್ ಟವರ್‌ನಿಂದ ಸುಮಾರು 60 ಲೀಟರ್ ಡೀಸೆಲ್ ಕಳವು ಮಾಡಿದ ಆರೋಪದ ಮೇಲೆ ಮೂವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂಡಸ್ ಮೊಬೈಲ್ ಟವರ್ ಕಂಪನಿಯಲ್ಲಿ ಸೆಕ್ಯುರಿಟಿ ಸೂಪರ್‌ವೈಸರ್ ಆಗಿ ಕೆಲಸ ಮಾಡುತ್ತಿರುವ ದಿನೇಶ್ ಕೆ(53) ಅವರು ನೀಡಿದ ದೂರಿನ ಆಧಾರದಲ್ಲಿ ಆ.24 ರಂದು ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 303(2)ರ ಅಡಿಯಲ್ಲಿ ಧೀಕ್ಷಣ್ ಹಾಗೂ ಇಬ್ಬರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಆಗಸ್ಟ್ 23ರಂದು ರಾತ್ರಿ ಸುಮಾರು 2 ಗಂಟೆಗೆ ಬಂದಾರು ಗ್ರಾಮದ ಟವರ್ ಬಳಿ ತಾಂತ್ರಿಕ ಸಿಬ್ಬಂದಿ ದೀಕ್ಷಿತ್ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ರಸ್ತೆಯ ಬಳಿ ನಿಲ್ಲಿಸಿದ್ದ KA-20-D-7442 ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಎರಡು ಕ್ಯಾನ್‌ಗಳಲ್ಲಿ ಡೀಸೆಲ್ ತುಂಬಿಸುತ್ತಿರುವುದು ಕಂಡುಬಂದಿದೆ. ಟಾರ್ಚ್ ಬೆಳಕಿನಲ್ಲಿ ಅವರನ್ನು ಗಮನಿಸಿ ಕಾರಿನ ಬಳಿ ತೆರಳುತ್ತಿದ್ದಂತೆ, ಮೂವರು ಡೀಸೆಲ್ ಕ್ಯಾನ್‌ಗಳ ಸಮೇತ ಕಾರಿನಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಪರಾರಿಯಾದವರಲ್ಲಿ ಇದೇ ಟವರ್‌ನಲ್ಲಿ ಈ ಹಿಂದೆ ಟೆಕ್ನಿಷಿಯನ್ ಆಗಿ ಕೆಲಸ ಮಾಡಿದ್ದ ಧೀಕ್ಷಣ್ ಎಂಬಾತನನ್ನು ಗುರುತಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಕಳವಾಗಿರುವ ಸುಮಾರು 60 ಲೀಟರ್ ಡೀಸೆಲ್‌ನ ಮೌಲ್ಯ ಸುಮಾರು 6 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya
error: Content is protected !!