25.7 C
ಪುತ್ತೂರು, ಬೆಳ್ತಂಗಡಿ
August 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಎರಡೂ ಜನರೇಟರ್ ಇದ್ದೂ ಯಾವುದೇ ಪ್ರಯೋಜನಕ್ಕಿಲ್ಲ: ಜನರು ಅಗತ್ಯ ಕೆಲಸಕ್ಕಾಗಿ ಕಾದು ವಾಪಸ್ ಹೋಗಬೇಕಾದ ಪರಿಸ್ಥಿತಿ

ಬೆಳ್ತಂಗಡಿ ತಾಲೂಕು ಕಚೇರಿ ದಿನನಿತ್ಯ ಜನರಿಂದ ತುಂಬಿ ತುಳುಕುತ್ತದೆ. ಆದರೆ ಇಲ್ಲಿ ವಿದ್ಯುತ್ ಪೂರೈಕೆ ಕಡಿತಗೊಂಡರೆ ಪರ್ಯಾಯ ವ್ಯವಸ್ಥೆ ಇಲ್ಲ. ಇರುವ ಎರಡೂ ಜನರೇಟರ್ ಯಾವುದೇ ಪ್ರಯೋಜನಕ್ಕಿಲ್ಲ. ಜನರು ತಮ್ಮ ಅಗತ್ಯ ಕೆಲಸಕ್ಕಾಗಿ ಕಾದು ಕಾದು ವಾಪಸ್ ಹೋಗಬೇಕಾದ ಪರಿಸ್ಥಿತಿ ಇದೆ.

ಬೆಳ್ತಂಗಡಿ ತಾಲೂಕು ಕಚೇರಿಯ ನೂತನ ಕಟ್ಟಡ 2018 ರಲ್ಲಿ ಉದ್ಘಾಟನೆಗೊಂಡು ಕೇವಲ 8 ವರ್ಷಗಳಾಯಿತು ಅಷ್ಟೇ. ಉದ್ಘಾಟನಾ ಸಂದರ್ಭದಲ್ಲಿ ಎರಡು ಜನರೇಟರ್ ಗಳಿತ್ತು. ಈಗಲೂ ಇದೆಯಾದರೂ ಎರಡೂ ಜನರೇಟರ್ ಗಳು ಯಾವುದೇ ಉಪಯೋಗಕ್ಕೆ ಬಾರದೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ವಿದ್ಯುತ್ ಕೈಕೊಟ್ಟರೆ ಕಂಪ್ಯೂಟರ್ ಗಳು ಸಂಪೂರ್ಣ ಬಂದ್ ಆಗುತ್ತದೆ. ಪರ್ಯಾಯ ವ್ಯವಸ್ಥೆಯಂತೂ ಯಾವುದೂ ಇಲ್ಲ. ಸಿಬ್ಬಂದಿಗಳು ಜನರಿಂದ ಬೈಸಿಕೊಂಡು ಸುಮ್ಮನೆ ಇರಬೇಕಾಷ್ಟೇ. ಕಚೇರಿ ವೆಚ್ಚದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಸರ್ಕಾರ ಬಿಡುಗಡೆಗೊಳಿಸಿದರೂ ಪ್ರಯೋಜನವಿಲ್ಲ.

ಐದಾರು ವರ್ಷಗಳಿಂದ ಸತತವಾಗಿ ಜನರೇಟರ್ ಗಾಳಿ , ಮಳೆ , ಬಿಸಿಲಿಗೆ ಮೈಯೊಡ್ಡಿ ತಾಲೂಕು ಕಚೇರಿಯ ಬದಿಯಲ್ಲಿದ್ದರೂ ಇಲ್ಲಿನ ತಹಶೀಲ್ದಾರರುಗಳು ಮಾತ್ರ ತಮಗೂ , ಜನರೇಟರ್ ಗೂ ಯಾವುದೇ ರೀತಿಯ ಸಂಬಂಧ ಇಲ್ಲದವರಂತೆ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ. ಇನ್ನಾದರೂ ಲಕ್ಷಾಂತರ ರೂಪಾಯಿ ಮೌಲ್ಯದ ಎರಡೂ ಜನರೇಟರ್ ಗಳು ಜನರ ಉಪಯೋಗಕ್ಕೆ ಲಭ್ಯವಾಗಲಿ , ಅಥವಾ ಎರಡೂ ಜನರೇಟರ್ ಗಳು ತುಕ್ಕು ಹಿಡಿದು ಗುಜರಿ ಅಂಗಡಿ ಸೇರುವುದರಲ್ಲಿ ಯಾವುದೇ ಸಂಶಯವಿಲ್ಲ.

Related posts

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಪ್ರೀತಮ್ ಜೈನ್ ರವರಿಗೆ ಗೌರವ

Suddi Udaya

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya
error: Content is protected !!