August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವದ ಪೂರ್ವಭಾವಿ ಸಭೆ

ಬೆಳ್ತಂಗಡಿ : ಆ.29 ರಿಂದ ಆ.31 ರವರೆಗೆ ಬೆಳ್ತಂಗಡಿ ಲಾಯಿಲದಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯುವ ಆರಾಧನ ಮಹೋತ್ಸವದ ಪೂರ್ವಭಾವಿ ಸಭೆ ರಾಯರ ಮಠದಲ್ಲಿ ಆ.25ರಂದು ಶ್ರೀ ಪೀತಾಂಬರ ಹೇರಾಜೆಯವರ ಅಧ್ಯಕ್ಷತೆಯಲ್ಲಿ ಜರಗಿತು.

ಅವರು ಮಾತನಾಡುತ್ತಾ ಊರ ಪರ ಊರಿನಿಂದ ಹೆಚ್ಚಿನ ಭಕ್ತರು ದಕ್ಷಿಣದ ಕಿರು ಮಂತ್ರಾಲಯ ಎಂಬ ಹೆಗ್ಗಳಿಕೆಗೆ ಪಾತ್ರ ವಾದ ರಾಯರ ಮಠಕ್ಕೆ ಆಗಮಿಸಬೇಕೆಂದು ಮನವಿ ಮಾಡಿದರು. ಆ.30 ರಂದು ಮಧ್ಯಾಹ್ನ 11 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಲಿರುವುದಾಗಿ ಅವರು ತಿಳಿಸಿದರು.


2026 ನೇ ಸಾಲಿನಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದೆಂದು ಪ್ರೊ. ಡಾ ಬಿ ಎ ಕುಮಾರ ಹೆಗ್ಡೆ ಮತ್ತು ಪ್ರೊ. ಎ ಕೃಷ್ಣಪ್ಪ ಪೂಜಾರಿಯವರು ತಿಳಿಸಿದರು.


ಕಾರ್ಯದರ್ಶಿ ವಸಂತ ಸುವರ್ಣ ಪ್ರಸ್ತಾವಿಸಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಜಿ ಸೋಮೇಗೌಡ, ಶ್ರೀಮತಿ ಉಮಾ ರಾವ್, ಶ್ರೀಮತಿ ಸುಶೀಲಾ ಹೆಗ್ಡೆ, ಮಂಜುನಾಥ ರೈ, ಕೃಷ್ಣ ಶೆಟ್ಟಿ, ಜಯಂತ ರಾಘವೇಂದ್ರ ನಗರ, ಶ್ರೀಮತಿ ಸುಧಾಮಣಿ ರಮಾನಂದ, ಮುಂತಾದ ಗಣ್ಯರು ಉಪಸ್ಥಿತರಿದ್ದರು. ಕೋಶಾಧಿಕಾರಿ ಶ್ರವಣ್ ರಾಜ್ ವಂದಿಸಿದರು.

Related posts

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಫೆ.21: ಸಹೋದರಿಯರಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಯವರ ಭರತನಾಟ್ಯ ರಂಗಪ್ರವೇಶ

Suddi Udaya

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಗೃಹಜ್ಯೋತಿ ಮರುಪರಿಶೀಲನಾ ಶಿಬಿರಕ್ಕೆ ಚಾಲನೆ: ರಾಜಕೀಯ‌ ಬೇಡ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಿ: ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

Suddi Udaya
error: Content is protected !!