ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ಪರಿಸರ ಸೂಕ್ಮ ವಲಯ ಎಂಬ ಯೋಜನೆಯಿಂದ ಬೆಳ್ತಂಗಡಿ ತಾಲೂಕಿನ ಬಾಧಿತವಾಗುವ ಗ್ರಾಮಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು ಇದರ ವತಿಯಿದ ಆ.31ರಂದು ಬೆಳಿಗ್ಗೆ 11ಕ್ಕೆ ಬೆಳ್ತಂಗಡಿ ಅಯ್ಯಪ್ಪ ಮಂದಿರದಿಂದ ತಾಲೂಕು ಕಛೇರಿ ವರೆಗೆ ಶಾಂತಿಯುತ ಮೆರವಣಿಗೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್.ಆರ್. ಭಾಸ್ಕರ್ ಸಾಲಿಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ ಜಿಲ್ಲೆಯ 44 ಗ್ರಾಮ ಪಂಚಾಯತ್ ಸೇರಿದಂತೆ ರಾಜ್ಯದ 1449 ಗ್ರಾಮಗಳು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬರುತ್ತಿದೆ. ಇದರಲ್ಲಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕಳೆಂಜ, ಕುತ್ಲೂರು, ಮಲವಂತಿಗೆ, ನಡ, ನಾಲ್ಕೂರು, ನಾವೂರು, ನೆರಿಯ, ಪುದುವೆಟ್ಟು, ರೆಖ್ಯ, ಸವಣಾಲು, ನಾರಾವಿ, ಶಿಬಾಜೆ, ಶಿಶಿಲ, ಶಿರ್ಲಾಲು, ಸುಲ್ಕೇರಿಮೊಗ್ರು ಒಟ್ಟು 17 ಗ್ರಾಮಗಳು ಒಳಪಟ್ಟಿದ್ದು ಬಾಧಿತ ಗ್ರಾಮಗಳನ್ನು ವರದಿಯಿಂದ ಕೈಬಿಡಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘ ಶಾಂತಿಯುತ ಮೆರವಣಿಗೆ ಹಮ್ಮಿಕೊಂಡಿದೆ. ಬೆಳ್ತಂಗಡಿ ಅಯ್ಯಪ್ಪ ಮಂದಿರದಿಂದ ಹೊರಟ ಶಾಂತಿಯುತ ಮೆರವಣಿಗೆ ತಾಲೂಕು ಕಛೇರಿ ತಲುಪಿ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ ನೀಡಲಿದ್ದಾರೆ.











