August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಎಚ್.ಐ.ವಿ ಕುರಿತು ಜಾಗೃತಿ ಕಾರ್ಯಕ್ರಮ

ಕಕ್ಯಪದವು; ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆಗಳು ಕಕ್ಯಪದವು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟಿ ಆಶ್ರಯದಲ್ಲಿ ಹಾಗೂ ಕಾಲೇಜಿನ ಮಹಿಳಾ ಕೋಶದ ಸಹಯೋಗದಲ್ಲಿ ಪ್ರೌಢ ,ಪದವಿಪೂರ್ವ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳು ಹಾಗೂ ಹೆಣ್ಣು ಮಕ್ಕಳಿಗೆ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಲಿಂಗಪ್ಪ ಮಾಸ್ತರ್ ಆಡಿಟೋರಿಯಂನಲ್ಲಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ತಜ್ಞ ಆಪ್ತಸಮಾಲೋಚಕರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮೊದಲ ಗೋಷ್ಠಿಯಲ್ಲಿ ಶ್ರೀಮತಿ ಅಕ್ಷತಾ, ಹದಿಹರೆಯದ ಆಪ್ತಸಮಾಲೋಚಕರು, ತಾಲೂಕು ಆಸ್ಪತ್ರೆ, ಬಂಟ್ವಾಳ ಇವರು “ಹೆಣ್ಣು ಮಕ್ಕಳ ಆರೋಗ್ಯ” ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹದಿಹರೆಯದ ಅವಧಿಯಲ್ಲಿ ಉಂಟಾಗುವ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು, ವೈಯಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ, ಹೆಣ್ಣುಮಕ್ಕಳು ವಹಿಸಬೇಕಾದ ಮುನ್ನೆಚ್ಚರಿಕೆಗಳು ಹಾಗೂ ಆರೋಗ್ಯ ಸಮಸ್ಯೆಗಳ ಸಂದರ್ಭದಲ್ಲಿ ವೈದ್ಯಕೀಯ ಸಲಹೆ ಪಡೆಯುವ ಮಹತ್ವವನ್ನು ವಿವರಿಸಿದರು. ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಎರಡನೇ ಗೋಷ್ಠಿಯಲ್ಲಿ ಶ್ರೀಮತಿ ವಾಣಿ, ಐಸಿಟಿಸಿ , ಆಪ್ತಸಮಾಲೋಚಕರು, ತಾಲೂಕು ಆಸ್ಪತ್ರೆ, ಬಂಟ್ವಾಳ ಇವರು “ಎಚ್.ಐ.ವಿ ಕುರಿತು ಜಾಗೃತಿ” ಎಂಬ ವಿಷಯದ ಕುರಿತು ಮಾಹಿತಿ ನೀಡಿದರು. ಎಚ್.ಐ.ವಿ ಸೋಂಕಿನ ಕಾರಣಗಳು, ಹರಡುವ ವಿಧಾನಗಳು, ಮುನ್ನೆಚ್ಚರಿಕೆ ಕ್ರಮಗಳು, ಪರೀಕ್ಷೆಯ ಮಹತ್ವ ಮತ್ತು ಎಚ್.ಐ.ವಿ ಸೋಂಕಿತರ ಬಗ್ಗೆ ಸಮಾಜದಲ್ಲಿ ಇರಬೇಕಾದ ಮಾನವೀಯತೆ ಹಾಗೂ ಸಹಾನುಭೂತಿಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿ, ಆರೋಗ್ಯದ ಕುರಿತು ಯಾವುದೇ ಸಮಸ್ಯೆ ಎದುರಾದಾಗ ಸೂಕ್ತ ಆರೋಗ್ಯ ಕೇಂದ್ರದ ನೆರವು ಪಡೆಯುವಂತೆ ತಿಳಿಸಿದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ, ಸ್ವಚ್ಛತೆ ಮತ್ತು ಜವಾಬ್ದಾರಿಯುತ ಜೀವನಶೈಲಿಯ ಕುರಿತು ಅರಿವು ಮೂಡಿಸುವಲ್ಲಿ ಪರಿಣಾಮಕಾರಿಯಾಯಿತು.
ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಆರೋಗ್ಯ ಮಾಹಿತಿಯನ್ನು ಒದಗಿಸುವುದರೊಂದಿಗೆ ಯಶಸ್ವಿಯಾಗಿ ನೆರವೇರಿತು.

ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಜನಾಧಿಕಾರಿ ಜಯಶ್ರೀ ಸ್ವಾಗತಿಸಿ, ಯೋಜನಾಧಿಕಾರಿ ವಿಂದ್ಯಾಶ್ರೀ ಎ ವಂದಿಸಿದರು.

Related posts

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya
error: Content is protected !!