August 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆ: ರೂ. 655 ಕೋಟಿ ವ್ಯವಹಾರ, ರೂ 5.05 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ 18% ಡಿವಿಡೆಂಟ್

ಗುರುವಾಯನಕರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು, ದ.ಕ. ಹಾಗೂ ಉಡುಪಿ ಜಿಲ್ಲೆಯ ಪತ್ತಿನ ಸಹಕಾರಿ ಸಂಘಗಳ ಮುಂಚೂಣಿಯಲ್ಲಿರುವ ಸಂಘಗಳ ಪೈಕಿ ಒಂದಾಗಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ರೂ 655 ಕೋಟಿ ವ್ಯವಹಾರ ನಡೆಸಿ, ರೂ. 5 ಕೋಟಿ ರೂ.ಗಿಂತ ಹೆಚ್ಚಿನ ಲಾಭಗಳಿಸಿದ್ದು ಸದಸ್ಯರಿಗೆ ಶೇ‌18 % ಡಿವಿಡೆಂಟ್ ನೀಡಲಾಗುವುದು ಎಂದು ಸೊಸೈಟಿಯ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಹೇಳಿದರು.

ಅವರು ಆ. 26ರಂದು ಗುರುವಾಯನಕೆರೆಯ ಕೇಂದ್ರ ಕಚೇರಿಯಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.

ಸೊಸೈಟಿಯು ಪ್ರಸ್ತುತ ಸುಮಾರು 36 ಸಾವಿರಕ್ಕೂ ಮಿಕ್ಕಿದ ಸದಸ್ಯರನ್ನು ಹೊಂದಿದೆ. ಎರಡು ತಿಂಗಳಲ್ಲಿ ಎರಡು ಬ್ರಾಂಚ್ ಓಪನಿಂಗ್ ಮಾಡುತ್ತಿದ್ದೇವೆ. ಆರಂಬೋಡಿ, ಸಿದ್ದಕಟ್ಟೆಯಲ್ಲಿ ಮುಂದಿನ ದಿನಗಳಲ್ಲಿ ಶಾಖೆಗಳನ್ನು ತೆರೆಯಲಾಗುವುದು ಎಂದರು.

ವೇದಿಕೆಯಲ್ಲಿ ನಿರ್ದೇಶಕರಾದ ಎಸ್. ಜಯರಾಮ ಶೆಟ್ಟಿ, ಬಿ.ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜ ಹೆಚ್., ರಘುರಾಮ ಶೆಟ್ಟಿ ಎ., ಕೃಷ್ಣ ರೈ ಟಿ., ಜಯರಾಮ ಭಂಡಾರಿ ಎಂ‌, ಪುರಂದರ ಶೆಟ್ಟಿ,ಮಂಜುನಾಥ ರೈ,ರಾಜು ಶೆಟ್ಟಿ, ಜಯರಾಮ ಶೆಟ್ಟಿ, ಸಾರಿಕಾ ಶೆಟ್ಟಿ, ವಿಜಯಾ ಬಿ‌ ಶೆಟ್ಟಿ, ಖಾಯಂ ಆಹ್ವಾನಿತರಾದ ರಾಜೇಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ ನೊಚ್ಚ ಉಪಸ್ಥಿತರಿದ್ದರು.

ಸೊಸೈಟಿ ಸಿಬ್ಬಂದಿಗಳು ಪ್ರಾರ್ಥನೆಗೈದರು.ಉಪಾಧ್ಯಕ್ಷ ಜಯಂತ ಶೆಟ್ಟಿ ಸ್ವಾಗತಿಸಿದರು. ಸಿಇಒ ಸುಜಯ್ ಶೆಟ್ಟಿ ವರದಿ ವಾಚಿಸಿದರು.ನಿರ್ದೇಶಕ ಪುಷ್ಪರಾಜ್ ಶೆಟ್ಟಿ ವಂದಿಸಿದರು. ಸಿಬ್ಬಂದಿಗಳು ಮತ್ತು ಸದಸ್ಯರು ಸಹಕರಿಸಿದರು.

Related posts

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಬಜಿರೆ: ಶ್ಯಾಮ ಹೆಗ್ಡೆ ಪೊಂಗರ್ತ್ಯಾರ್ ನಿಧನ

Suddi Udaya

ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರಾಧ್ಯ ಪ್ರಥಮ ಸ್ಥಾನ

Suddi Udaya

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

Suddi Udaya
error: Content is protected !!