ಗುರುವಾಯನಕರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು, ದ.ಕ. ಹಾಗೂ ಉಡುಪಿ ಜಿಲ್ಲೆಯ ಪತ್ತಿನ ಸಹಕಾರಿ ಸಂಘಗಳ ಮುಂಚೂಣಿಯಲ್ಲಿರುವ ಸಂಘಗಳ ಪೈಕಿ ಒಂದಾಗಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ರೂ 655 ಕೋಟಿ ವ್ಯವಹಾರ ನಡೆಸಿ, ರೂ. 5 ಕೋಟಿ ರೂ.ಗಿಂತ ಹೆಚ್ಚಿನ ಲಾಭಗಳಿಸಿದ್ದು ಸದಸ್ಯರಿಗೆ ಶೇ18 % ಡಿವಿಡೆಂಟ್ ನೀಡಲಾಗುವುದು ಎಂದು ಸೊಸೈಟಿಯ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಹೇಳಿದರು.

ಅವರು ಆ. 26ರಂದು ಗುರುವಾಯನಕೆರೆಯ ಕೇಂದ್ರ ಕಚೇರಿಯಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.
ಸೊಸೈಟಿಯು ಪ್ರಸ್ತುತ ಸುಮಾರು 36 ಸಾವಿರಕ್ಕೂ ಮಿಕ್ಕಿದ ಸದಸ್ಯರನ್ನು ಹೊಂದಿದೆ. ಎರಡು ತಿಂಗಳಲ್ಲಿ ಎರಡು ಬ್ರಾಂಚ್ ಓಪನಿಂಗ್ ಮಾಡುತ್ತಿದ್ದೇವೆ. ಆರಂಬೋಡಿ, ಸಿದ್ದಕಟ್ಟೆಯಲ್ಲಿ ಮುಂದಿನ ದಿನಗಳಲ್ಲಿ ಶಾಖೆಗಳನ್ನು ತೆರೆಯಲಾಗುವುದು ಎಂದರು.
ವೇದಿಕೆಯಲ್ಲಿ ನಿರ್ದೇಶಕರಾದ ಎಸ್. ಜಯರಾಮ ಶೆಟ್ಟಿ, ಬಿ.ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜ ಹೆಚ್., ರಘುರಾಮ ಶೆಟ್ಟಿ ಎ., ಕೃಷ್ಣ ರೈ ಟಿ., ಜಯರಾಮ ಭಂಡಾರಿ ಎಂ, ಪುರಂದರ ಶೆಟ್ಟಿ,ಮಂಜುನಾಥ ರೈ,ರಾಜು ಶೆಟ್ಟಿ, ಜಯರಾಮ ಶೆಟ್ಟಿ, ಸಾರಿಕಾ ಶೆಟ್ಟಿ, ವಿಜಯಾ ಬಿ ಶೆಟ್ಟಿ, ಖಾಯಂ ಆಹ್ವಾನಿತರಾದ ರಾಜೇಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ ನೊಚ್ಚ ಉಪಸ್ಥಿತರಿದ್ದರು.
ಸೊಸೈಟಿ ಸಿಬ್ಬಂದಿಗಳು ಪ್ರಾರ್ಥನೆಗೈದರು.ಉಪಾಧ್ಯಕ್ಷ ಜಯಂತ ಶೆಟ್ಟಿ ಸ್ವಾಗತಿಸಿದರು. ಸಿಇಒ ಸುಜಯ್ ಶೆಟ್ಟಿ ವರದಿ ವಾಚಿಸಿದರು.ನಿರ್ದೇಶಕ ಪುಷ್ಪರಾಜ್ ಶೆಟ್ಟಿ ವಂದಿಸಿದರು. ಸಿಬ್ಬಂದಿಗಳು ಮತ್ತು ಸದಸ್ಯರು ಸಹಕರಿಸಿದರು.











