August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೊಸೈಟಿಯಿಂದ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ ಅವರ ನೇತೃತ್ವದಲ್ಲಿ ಕಚ್ಚಾರಸ್ತೆಗಳ ದುರಸ್ತಿ: ಸಹಕಾರಿಯಿಂದ ಸಮೃದ್ಧಿ ಆಶಯದೊಂದಿಗೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಜ್ಜೆ

ಬೆಳ್ತಂಗಡಿ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಸಹಕಾರಿಯಿಂದ ಸಮೃದ್ಧಿ ಸಂಘದ ಸದಸ್ಯರ ಅನುಕೂಲಕ್ಕಾಗಿ ಎಂಬ ಸದುದ್ದೇಶದೊಂದಿಗೆ ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಕಚ್ಚಾರಸ್ತೆಗಳ ದುರಸ್ತಿ ಕಾರ್ಯ ಕೈಗೊಂಡಿದೆ.

ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ ಅವರ ನೇತೃತ್ವದಲ್ಲಿ ಪಾರೆಂಕಿ, ಕುಕ್ಕಳ, ಸೋಣಂದೂರು ಹಾಗೂ ಮಾಲಾಡಿ ವ್ಯಾಪ್ತಿಯಲ್ಲಿ ಬರುವ ಕಚ್ಚಾರಸ್ತೆಗಳನ್ನು ದುರಸ್ತಿ ಮಾಡಲಾಯಿತು. ಮಳೆಗಾಲದಲ್ಲಿ ಹದಗೆಟ್ಟಿದ್ದ ರಸ್ತೆಗಳ ದುರಸ್ತಿಯಿಂದ ಗ್ರಾಮಸ್ಥರು, ರೈತರು ಹಾಗೂ ವಾಹನ ಸವಾರರಿಗೆ ಸಂಚಾರಕ್ಕೆ ಅನುಕೂಲವಾಗಿದೆ.

ಸಹಕಾರಿ ಸಂಘಗಳು ಕೇವಲ ಸಾಲ-ವ್ಯವಹಾರಗಳಿಗೆ ಸೀಮಿತವಾಗದೆ, ಗ್ರಾಮೀಣ ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಲ್ಲೂ ಕೈಜೋಡಿಸಬಹುದು ಎಂಬುದಕ್ಕೆ ಮಡಂತ್ಯಾರು ಸೊಸೈಟಿಯ ಈ ಕಾರ್ಯ ಮಾದರಿಯಾಗಿದೆ. ಸಂಘದ ವತಿಯಿಂದ ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ, ಉಪಾಧ್ಯಕ್ಷ ಕಾಂತಪ್ಪ ಗೌಡ, ನಿರ್ದೇಶಕರಾದ ಕೆ. ಅರವಿಂದ ಜೈನ್, ಧನಲಕ್ಷ್ಮಿ, ಅಮಿತಾ ಪ್ರಿಯಾ ಲೋಬೋ, ಸುರೇಶ್ ಎಸ್., ಶಶಿಪ್ರಭಾ, ಮಹಾಬಲ ಕೆ., ಗಣೇಶ್ ಮೂಲ್ಯ, ಗೋಪಾಲಕೃಷ್ಣ ಕೆ., ಕಿಶೋರ್ ಕುಮಾರ್ ಶೆಟ್ಟಿ, ಪದ್ಮನಾಭ ಸಾಲಿಯಾನ್ ಹಾಗೂ ಸಿಇಒ ಜೋಕೀ ಡಿಸೋಜಾ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya
error: Content is protected !!