August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ 517 ಕೋಟಿ ವ್ಯವಹಾರ,ರೂ 2.12 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ 13 ಡಿವಿಡೆಂಟ್

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ ಇದರ ವಾರ್ಷಿಕ ಮಹಾಸಭೆಯು ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಇವರ ಅಧ್ಯಕ್ಷತೆಯಲ್ಲಿ ನಮನ ಸಭಾಭವನದಲ್ಲಿ ಆ 27 ರಂದು ನಡೆಯಿತು.

ಬಳಿಕ ರಾಕೇಶ್ ಹೆಗ್ಡೆ ಅವರು ಮಾತನಾಡಿ ಆರ್ಥಿಕ ವರ್ಷದಲ್ಲಿ ಸಂಘವು ರೂ 517 ಕೋಟಿ ವ್ಯವಹಾರ ನಡೆಸಿ,ರೂ 2.12 ಕೋಟಿ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ 13 ಡಿವಿಡೆಂಟ್ ನೀಡಲಾಗುವುದು.ಸಹಕಾರವೇ ಶಕ್ತಿ,ಸದಸ್ಯರ ವಿಶ್ವಾಸವೇ ಸಂಘದ ಯಶಸ್ಸು ಎಂದರು.

ಸೊಸೈಟಿಯು ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು,ಎಲ್ಲರ ಸಹಕಾರ ಮುಖ್ಯವಾಗಿದೆ. ಸುವರ್ಣ ಸಂಭ್ರಮದ ಪ್ರಯುಕ್ತ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ಉಪಾಧ್ಯಕ್ಷ ಜನಾರ್ಧನ,ನಿರ್ದೇಶಕರಾದ ಗುರುಪ್ರಸಾದ್ ,ವಿಶ್ವನಾಥ ಹೊಳ್ಳ,ಹೇಮಂತ್, ದೇವಿಪ್ರಸಾದ್ ಶೆಟ್ಟಿ, ದಿನೇಶ್ ಪಿಕೆ,ದೇಜಪ್ಪ ಪೂಜಾರಿ, ಕೊರಗಪ್ಪ, ಸುಂದರಿ, ಮಮತಾ, ಧರ್ಣಪ್ಪ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

ಅಧ್ಯಕ್ಷ ರಾಕೇಶ್ ಹೆಗ್ಡೆ ಸ್ವಾಗತಿಸಿದರು. ಸಿಇಓ ಮೀರಾ ವರದಿ ವಾಚಿಸಿದರು.ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಸತೀಶ್ ಕೆ, ಸಿಬ್ಬಂದಿಗಳಾದ ಪ್ರಶಾಂತ್ ಎಸ್, ಭರತ್ ರಾಜ್,ಎನ್.ಜಗದೀಶ್ ಶೆಟ್ಟಿ, ಮಮತಾ, ಸಂತೋಷ ಎ, ಹರೀಶ ನಾಯ್ಕ, ಯತೀಶ, ದಿನೇಶ್ ಬಿ, ಪ್ರವೀಣ, ಶ್ರೀದೇವಿ, ಸುಮಲತಾ ಹಾಗೂ ಸದಸ್ಯರು ಸಹಕರಿಸಿದರು.

Related posts

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya

ಡಿಕೆಶಿ ಮುಖ್ಯಮಂತ್ರಿ, ಇದು ಕಾರ್ಯಕರ್ತರ ಗೆಲುವು: ರಂಜನ್ ಜಿ ಗೌಡ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya
error: Content is protected !!