August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ ತಾಲೂಕು ಆರೋಗ್ಯ ಅಧಿಕಾರಿಗಳೊಂದಿಗೆ ಸರಕಾರಿ ವೈದ್ಯಾಧಿಕಾರಿಗಳು ಭೇಟಿ

ಉಜಿರೆ: ಇಲ್ಲಿಯ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ ತಾಲೂಕು ಆರೋಗ್ಯಾಧಿಕಾರಿ ಸಂಜತ್ ವೈದ್ಯ ಅಧಿಕಾರಿ ಡಾ. ವೆಂಕಟಸ್ವಾಮಿ ( ಸ್ತ್ರೀ ರೋಗ ತಜ್ಞರು) ಹಾಗೂ ಡಾ.ರಾಘವೇಂದ್ರ ಶಸ್ತ್ರಚಿಕಿತ್ಸೆ ತಜ್ಞರು ಭೇಟಿ ನೀಡಿದರು.

ಸ್ತ್ರೀ ರೋಗ ತಜ್ಞರಾದ ಡಾ.ವೆಂಕಟ ಸ್ವಾಮಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಶಿಕ್ಷಣವನ್ನು ಪಡೆದು ಉತ್ತಮ ಸಾಧನೆಯನ್ನು ಮಾಡಿ ಮಾರ್ಗದರ್ಶನವನ್ನು ನೀಡಬೇಕು . ಅವರು ತನ್ನ ಬಾಲ್ಯದ ಹಾಸ್ಟೆಲ್ ಜೀವನ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ತಾಲೂಕು ಅಧಿಕಾರಿಯಾದ ಸಂಜಾತ ಮಾತನಾಡಿ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ವಚ್ಛತೆಯ ಪ್ರಾತ್ಯಕ್ಷಿಕೆಯನ್ನು ನೀಡಿ ಆರೋಗ್ಯ ಸಂರಕ್ಷಣೆ ಬಗ್ಗೆ ತಿಳಿಸಿದರು

ರತ್ನಮಾನಸ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಸ್ವಾಗತಿಸಿ, ಧನ್ಯವಾದ ಸಲ್ಲಿಸಿದರು . ವೇದಿಕೆಯಲ್ಲಿ ಭಜನ ತರಬೇತುದಾರರಾದ ನಾಗೇಶ್ ನೇರಿಯ ಹಾಗೂ ರತ್ನಮಾನಸದ ಅಧ್ಯಾಪಕರಾದ ರವಿಚಂದ್ರ ಹಾಗೂ ಉದಯರಾಜ್ ,ದೀಪಕ್ ಹಾಗೂ ರತ್ನಮಾನಸ ದ ಹಿರಿಯ ವಿಧ್ಯಾರ್ಥಿ ಗಣೇಶ್ ಉಪಸ್ಥಿತರಿದ್ದರು . ರತ್ನ ಮಾನಸದ ವಿದ್ಯಾರ್ಥಿಗಳ ಜೀವನ ಶಿಕ್ಷಣಗಳ ಬಗ್ಗೆ ತಿಳಿದು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಬೆಳ್ತಂಗಡಿ: ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ ನಾಟಿಕೋಳಿ ಮರಿಗಳ ವಿತರಣೆ

Suddi Udaya

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya
error: Content is protected !!