August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಿತರ ವಿತರಣೆಗೆ ಸರ್ವರ್ ಡೌನ್ : ದಿನವಿಡೀ ನ್ಯಾಯಬೆಲೆ ಅಂಗಡಿ ಮುಂದೆ ಕಾದು ಮರಳಿ ಮನೆಗೆ ಹೋಗುವ ಪರಿಸ್ಥಿತಿ

ಬೆಳ್ತಂಗಡಿ: ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ವಿತರಣೆಯಲ್ಲಿ ಸರ್ವ‌ರ್ ಸಮಸ್ಯೆ ಉಂಟಾಗುತ್ತಿದ್ದು,  ಇದರಿಂದ ಪಡಿತರ ಫಲಾನುಭವಿಗಳು ಗಂಟೆಗಟ್ಟಲೇ ಕಾಯುತ್ತಿದ್ದು ಸಮಸ್ಯೆ ತೀವ್ರಗೊಂಡರು ಸಮಸ್ಯೆ ಇನ್ನೂ ಬಗೆಹರಿಯದಿರುವುದು ಸಾರ್ವಜನಿಕರು ಆಕ್ರೋಶಕ್ಕೆ ಗುರಿಯಾಗಿದೆ.

ಕಳೆದ ನಾಲೈದು ದಿನಗಳಿಂದ ಪಟ್ಟಣ ಸೇರಿದಂತೆ ತಾಲ್ಲೂಕಿನ ಗ್ರಾಮಗಳಲ್ಲಿ ಪಡಿತರ ಪಡೆಯಲು ಬಯೋಮೆಟ್ರಿಕ್ ನೀಡಲು ಬರುವ ಪ್ರತಿಯೊಬ್ಬರಿಗೂ ಪಡಿತರ ಅಂಗಡಿಯವರು ‘ಸರ್ವರ್ ಇಲ್ಲ’ ಎಂದು ಹೇಳುತ್ತಿದ್ದಾರೆ.

ಸರ್ವರ್ ಸಮಸ್ಯೆಯಿಂದಾಗಿ ಫಲಾನುಭವಿಗಳು ದಿನವಿಡೀ ನ್ಯಾಯಬೆಲೆ ಅಂಗಡಿ ಮುಂದೆ ಕಾದು ಮರಳಿ ಮನೆಗೆ ಹೋಗುವುದು ಸಾಮಾನ್ಯವಾಗಿದೆ. ಗುರುವಾರವೂ ಸರ್ವರ್ ಸಮಸ್ಯೆಯಾಗಿದೆ. ಈ ಬಾರಿ ಕೇಂದ್ರದ ಎನ್ ಏಫ್ ಎಸ್ ಎ ಯೋಜನೆಯಡಿ ಆಗಷ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರವನ್ನು ಒಟ್ಟಿಗೆ ನೀಡಲಾಗುತ್ತಿದ್ದು ಅದಕ್ಕಾಗಿ ಎರಡು ಪ್ರತ್ಯೇಕ ಬಯೊಮೆಟ್ರಿಕ್ ಥಂಬ್ ನೀಡಬೇಕಿರುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಒಂದು ಥಂಬ್ ಅಂಗೀಕರ ಗೊಂಡರೆ ಮತ್ತೊಂದು ಥಂಬ್ ಅಂಗೀಕರಕ್ಕೆ 20 ನಿಮಿಷ ಕಾಯುವ ಪರಿಸ್ಥಿತಿ ಇದೆ.

ತಾಲ್ಲೂಕಿನಲ್ಲಿ ಪಡಿತರ ಪಡೆಯುವ 3,258 ಅಂತ್ಯೋದಯ ಹಾಗೂ ಬಿಪಿಎಲ್ (ಪಿ.ಎಚ್.ಎಚ್) ಒಟ್ಟು 45, 128 ಪಡಿತರದಾರರಿದ್ದಾರೆ. ಶೇ. 60 ರಷ್ಟು ಪಡಿತರದಾರರ ಬಯೋಮೆಟ್ರಿಕ್ ಆಗಿದ್ದು. ಇನ್ನೂ ಶೇ. 40 ರಷ್ಟು ಬಯೋಮೆಟ್ರಿಕ್ ಬಾಕಿ ಇವೆ.

‘ಅಧಿಕಾರಿಗಳು ನಿತ್ಯ ಸರ್ವ‌ರ್ ಸಮಸ್ಯೆ ಎಂದು ಹೇಳುತ್ತಾರೆ. ವಾರ ಆಯ್ತು ನಿತ್ಯ ಬಂದು ಹೋಗುತ್ತಿದ್ದೇವೆ’ ಬಯೋಮೆಟ್ರೀಕ್ ಆಗುತ್ತಿಲ್ಲ ಎಂದು ಪಡಿತರ ಫಲಾನುಭವಿ ಧನ್ಯಾ ಭಂಡಾರಿ ಅಸಮಾಧಾನ ವ್ಯಕ್ತಪಡಿಸಿದರು.

‘ರಾಜ್ಯದಾದ್ಯಂತ ಸರ್ವರ್ ಸಮಸ್ಯೆಯಿದ್ದು, ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೂ ತರಲಾಗಿದೆ. ಸಮಸ್ಯೆ ಬಗೆಹರಿಯಲಿದೆ’ ಎಂದು ಬೆಳ್ತಂಗಡಿ ಆಹಾರ ಇಲಾಖೆ ಸುದ್ದಿ ಉದಯಕ್ಕೆ ಪ್ರತಿಕ್ರಿಯಿಸಿದೆ.

Related posts

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
error: Content is protected !!