August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ 168 ಕೋಟಿ ವ್ಯವಹಾರ-ರೂ 71.63 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆ.27ರಂದು ನಡೆಯಿತು.

ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಕೆ. ಹರೀಶ್ ಕುಮಾರ್, ಸಂಘವು ಕಳೆದ ಆರ್ಥಿಕ ವರ್ಷದಲ್ಲಿ ₹168 ಕೋಟಿಗೂ ಅಧಿಕ ವ್ಯವಹಾರ ನಡೆಸಿ ₹71.63 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.12ರಷ್ಟು ಡಿವಿಡೆಂಡ್ ನೀಡಲಾಗುವುದು ಎಂದು ತಿಳಿಸಿದರು.

ಸಂಘದಲ್ಲಿ 1,032 ಎ ತರಗತಿ ಹಾಗೂ 2,061 ಸಿ ವರ್ಗದ ಸದಸ್ಯರಿದ್ದು, ₹1 ಕೋಟಿಗೂ ಅಧಿಕ ಪಾಲು ಬಂಡವಾಳ ಹೊಂದಿದೆ. ₹98 ಕೋಟಿ ಠೇವಣಿ ಸಂಗ್ರಹವಾಗಿದ್ದು, ₹93 ಕೋಟಿ ಸಾಲ ವಿತರಿಸಲಾಗಿದೆ. ನಿಡ್ಲೆ ಹಾಗೂ ಕಡಬದಲ್ಲಿ ಸಂಘದ ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರ ಉತ್ತಮ ವ್ಯವಹಾರದಿಂದ ಸಂಘದ ಬೆಳವಣಿಗೆಗೆ ಸಹಕಾರಿಯಾಗಿದೆ. ಮುಂದಿನ ದಿನಗಳಲ್ಲಿ ಉಜಿರೆ ಹಾಗೂ ನೆರಿಯದಲ್ಲಿ ಶಾಖೆಗಳನ್ನು ತೆರೆಯುವ ಕುರಿತು ಆಲೋಚನೆ ನಡೆಸಲಾಗುತ್ತಿದೆ ಎಂದರು.

ಸಂಘದ ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್, ನಿರ್ದೇಶಕರಾದ ಎಬಿ ಉಮೇಶ್, ಬಿ.ಎಂ. ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ಕೆ.ಎಸ್. ಯೋಗೀಶ್ ಕುಮಾರ್, ಕೆ. ರಾಮಚಂದ್ರ ಗೌಡ, ಶೈಲೇಶ್ ಕುಮಾರ್, ವಿ. ರಮೇಶ್ ಪೂಜಾರಿ, ಮೋಹನ್ ಶೆಟ್ಟಿಗಾರ್, ರಾಮಚಂದ್ರ ಭಟ್ ಅರೆಕ್ಕಲ್, ಉಷಾ ಶರತ್, ರಾಗ್ನೀಶ್ ಹಾಗೂ ಅಭಿನಂದನ್ ಹರೀಶ್ ಕುಮಾರ್ ಉಪಸ್ಥಿತರಿದ್ದರು.
ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್ ಸ್ವಾಗತಿಸಿದರು. ನಿರ್ದೇಶಕ ಎಬಿ ಉಮೇಶ್ ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಸಿಇಒ ಪ್ರದೀಪ್ ಕುಮಾರ್ ವರದಿ ವಾಚಿಸಿದರು. ಸಿಬ್ಬಂದಿ ಯುವರಾಜ್ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ರಾಮಚಂದ್ರ ಗೌಡ ವಂದಿಸಿದರು.

ಸಿಬ್ಬಂದಿಗಳಾದ ರಶ್ಮಿತಾ ಸಂತೋಷ್, ಚೈತ್ರ, ಮನೋಜ್ ಕುಮಾರ್, ಶ್ರವಣ್ ಕುಮಾರ್, ಅನುಶ್ರೀ ಎಂ., ರಮ್ಯಶಾರದ, ಗೋಪಾಲ ಎಸ್., ಪ್ರತಿಮಾ, ಸುಷ್ಮಾ ಆರ್. ಹಾಗೂ ನಿತ್ಯನಿಧಿ ಸಂಗ್ರಹಕರು ಮತ್ತು ಸದಸ್ಯರು ಸಹಕರಿಸಿದರು.

Related posts

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!