August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಐದು ದೇವರ ಗುಡಿಗಳ ಶಿಲಾನ್ಯಾಸ

ಕೊಕ್ಕಡ: ಇಲ್ಲಿಯ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಐದು ದೇವರ ಗುಡಿಗಳ ಶಿಲಾನ್ಯಾಸ ಕಾರ್ಯಕ್ರಮವು ಆ.27ರಂದು ನಡೆಯಿತು.

ದೇವಳದ ತಂತ್ರಿಗಳಾದ ನೀಲೇಶ್ವರ ಎಡಮನೆ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಗಣಹೋಮ, ಶಿಲಾಪೂಜೆಯನ್ನು ನೆರವೇರಿಸಿದರು. ವಾಸ್ತುಶಿಲ್ಪಿ ಕೃಷ್ಣಪ್ರಸಾದ ಮುನಿಯಂಗಳ ಇವರು ವಿಷ್ಣುಮೂರ್ತಿ ದೇವರ ಗುಡಿಯ ಶಿಲಾನ್ಯಾಸವನ್ನೂ, ಕದ್ರಿ ಮಂಜುನಾಥ ದೇವರ ಅರ್ಚಕರಾದ ಚತುರ್ವೇದಿ ಪ್ರಭಾಕರ ಅಡಿಗರು ನೀಲಕಂಠ ದೇವರ ಗುಡಿಯ ಶಿಲಾನ್ಯಾಸವನ್ನೂ, ಬಿಲ್ಲವ ಮುಖಂಡ ರಾಘವ ಪೂಜಾರಿ ಕೊಲ್ಲಾಜೆ ಉಳ್ಳಾಳ್ತಿ ದೇವಿಯ ಗುಡಿಯ ಶಿಲಾನ್ಯಾಸವನ್ನೂ, ಲಕ್ಮೀನಾರಾಯಣ ತೋಡ್ತಿಲ್ಲಾಯ ಗಣಪತಿ ದೇವರ ಗುಡಿಯ ಶಿಲಾನ್ಯಾಸವನ್ನೂ, ಸೌತಡ್ಕ ಮಹಾಗಣಪತಿ ದೇಗುಲದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಶಾಸ್ತಾರ ಗುಡಿಯ ಶಿಲಾನ್ಯಾಸವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಪವಿತ್ರಪಾಣಿ ರಾಧಾಕೃಷ್ಣ ಯಡಪಡಿತ್ತಾಯ, ಅರ್ಚಕ ರಮಾನಂದ ಭಟ್, ಬಾಲಕೃಷ್ಣ ಕೆದಿಲಾಯ, ಸುಬ್ರಹ್ಮಣ್ಯ ಉಪ್ಪಾರ್ಣ, ಸುಬ್ರಹ್ಮಣ್ಯ ತೋಡ್ತಿಲ್ಲಾಯ ಕುಶಾಲಪ್ಪ ಗೌಡ ಪೂವಾಜೆ, ವಿಶ್ವನಾಥ ಪೂಜಾರಿ ಕೊಲ್ಲಾಜೆ, ಜಯರಾಮ ನೆಲ್ಲಿತ್ತಾಯ, ಕುಶಾಲಪ್ಪಗೌಡ ಪುಡಿಕೆತ್ತೂರು, ಡಾ.ಮೋಹನದಾಸ ಗೌಡ, ರಮೇಶ ಯಡಪಡಿತ್ತಾಯ ಕೊಡಂಕಿರಿ, ಜೀರ್ಣೋಧ್ದಾರ ಸಮಿತಿ ಸದಸ್ಯರು, ಬೈಲುವಾರು ಸಮಿತಿಯ ಸದಸ್ಯರು, ಊರಿನ, ಸೀಮೆಯ ಭಕ್ತರು ಭಾಗವಹಿಸಿದ್ದರು.

Related posts

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya

ಮಿತ್ತಬಾಗಿಲು ಕೋಳಿ ಅಂಕದ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!