ಬೆಳ್ತಂಗಡಿ: ತಾಲೂಕಿನ ವೇಣೂರು–ಕೊಕ್ಕಡ ಕೇಂದ್ರದ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎಂದು ಮೋಹನ್ ಗೌಡ ಕಲ್ಮಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
SSLC/PUC ಉತ್ತೀರ್ಣರಾದ 25ರಿಂದ 40 ವರ್ಷದೊಳಗಿನವರಿಗೆ ತಿಂಗಳಿಗೆ ರೂ.25,000ರಿಂದ ರೂ.35,000ರವರೆಗೆ ವೇತನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ವಿಶೇಷ ಅರ್ಹತೆಯುಳ್ಳ ದ್ವಿತೀಯ ಪಿಯುಸಿ, ಪದವಿ ಹಾಗೂ ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದವರು ತಿಳಿಸಿದ್ದಾರೆ.
ಸೆ.1ರಂದು ಮಂಗಳವಾರ ಬೆಳಿಗ್ಗೆ ಗಂಟೆ 10 ರಿಂದ 12.30ರವರೆಗೆ ಬೆಳ್ತಂಗಡಿ ರಕ್ಷಾ ಆರ್ಕೇಡ್ ನಲ್ಲಿರುವ ಸುದ್ದಿ ಉದಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ 7022560060 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.











