August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೊಸೈಟಿಯಿಂದ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ ಅವರ ನೇತೃತ್ವದಲ್ಲಿ ಕಚ್ಚಾರಸ್ತೆಗಳ ದುರಸ್ತಿ: ಸಹಕಾರಿಯಿಂದ ಸಮೃದ್ಧಿ ಆಶಯದೊಂದಿಗೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಜ್ಜೆ

ಬೆಳ್ತಂಗಡಿ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಸಹಕಾರಿಯಿಂದ ಸಮೃದ್ಧಿ ಸಂಘದ ಸದಸ್ಯರ ಅನುಕೂಲಕ್ಕಾಗಿ ಎಂಬ ಸದುದ್ದೇಶದೊಂದಿಗೆ ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಕಚ್ಚಾರಸ್ತೆಗಳ ದುರಸ್ತಿ ಕಾರ್ಯ ಕೈಗೊಂಡಿದೆ.

ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ ಅವರ ನೇತೃತ್ವದಲ್ಲಿ ಪಾರೆಂಕಿ, ಕುಕ್ಕಳ, ಸೋಣಂದೂರು ಹಾಗೂ ಮಾಲಾಡಿ ವ್ಯಾಪ್ತಿಯಲ್ಲಿ ಬರುವ ಕಚ್ಚಾರಸ್ತೆಗಳನ್ನು ದುರಸ್ತಿ ಮಾಡಲಾಯಿತು. ಮಳೆಗಾಲದಲ್ಲಿ ಹದಗೆಟ್ಟಿದ್ದ ರಸ್ತೆಗಳ ದುರಸ್ತಿಯಿಂದ ಗ್ರಾಮಸ್ಥರು, ರೈತರು ಹಾಗೂ ವಾಹನ ಸವಾರರಿಗೆ ಸಂಚಾರಕ್ಕೆ ಅನುಕೂಲವಾಗಿದೆ.

ಸಹಕಾರಿ ಸಂಘಗಳು ಕೇವಲ ಸಾಲ-ವ್ಯವಹಾರಗಳಿಗೆ ಸೀಮಿತವಾಗದೆ, ಗ್ರಾಮೀಣ ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಲ್ಲೂ ಕೈಜೋಡಿಸಬಹುದು ಎಂಬುದಕ್ಕೆ ಮಡಂತ್ಯಾರು ಸೊಸೈಟಿಯ ಈ ಕಾರ್ಯ ಮಾದರಿಯಾಗಿದೆ. ಸಂಘದ ವತಿಯಿಂದ ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ, ಉಪಾಧ್ಯಕ್ಷ ಕಾಂತಪ್ಪ ಗೌಡ, ನಿರ್ದೇಶಕರಾದ ಕೆ. ಅರವಿಂದ ಜೈನ್, ಧನಲಕ್ಷ್ಮಿ, ಅಮಿತಾ ಪ್ರಿಯಾ ಲೋಬೋ, ಸುರೇಶ್ ಎಸ್., ಶಶಿಪ್ರಭಾ, ಮಹಾಬಲ ಕೆ., ಗಣೇಶ್ ಮೂಲ್ಯ, ಗೋಪಾಲಕೃಷ್ಣ ಕೆ., ಕಿಶೋರ್ ಕುಮಾರ್ ಶೆಟ್ಟಿ, ಪದ್ಮನಾಭ ಸಾಲಿಯಾನ್ ಹಾಗೂ ಸಿಇಒ ಜೋಕೀ ಡಿಸೋಜಾ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya

ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!