28.7 C
ಪುತ್ತೂರು, ಬೆಳ್ತಂಗಡಿ
August 28, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಆ.30: ತಾಲೂಕು ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ-ನೂತನ ಪದಾಧಿಕಾರಿಗಳ ಪದಗ್ರಹಣ

ಉಜಿರೆ: ತಾಲೂಕು ವೀರಶೈವ ಲಿಂಗಾಯತ ಸಂಘ ಇದರ ವಾರ್ಷಿಕೋತ್ಸವ, ಸಾಧಕರು-ನಿವೃತ್ತರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ೨೦೨೬-೨೮ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.೩೦ರಂದು ಉಜಿರೆ ಶಾರದಾ ಮಂಟಪದಲ್ಲಿ ನಡೆಯಲಿದೆ.

ಉಡುಪಿ ಅಲ್ಲಮಪ್ರಭು ಅನುಭಾವ ಪೀಠದ ಪೀಠಾಧಿಪತಿ ಶರಣ ಜಗನ್ನಾಥಪ್ಪ ಪನಸಾಲೆ ದೀಪ ಪ್ರಜ್ವಲನೆಗೊಳಿಸಲಿದ್ದಾರೆ. ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ವೀರಶೈವ ಲಿಂಗಾಯತ ಸಂಘದ ಅಧ್ಯಕ್ಷ ಪಂಚಾಕ್ಷರಪ್ಪ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಕ್ಕಮಗಳೂರು ನಿವೃತ್ತ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಹೆಚ್.ಎಮ್., ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಮಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸಪ್ಪ ರೊಟ್ಟಿ ಉಪಸ್ಥಿತರಿರುವರು. ಬೆಳ್ತಂಗಡಿ ತಾಲೂಕು ವೀರಶೈವ ಲಿಂಗಾಯತ ಸಂಘದ ಕಾರ್ಯದರ್ಶಿ ಕಲ್ಲೇಶಪ್ಪ ಕೆ.ಬಿ. ಉಪಸ್ಥಿತರಿರುವರು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನವೀನ್ ಪ್ರಕಾಶ್, ಉಪಾಧ್ಯಕ್ಷರಾಗಿ ಗಾಯತ್ರಿ ವಿಶ್ವನಾಥ ಲಿಂಗಾಯತ ಉಜಿರೆ, ವಿಠಲ ಲಿಂಗಾಯತ ಪುದ್ದೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಸೌಮ್ಯ ವಸಂತ್ ಬಟ್ಟಾಜೆ ಕಲ್ಮಂಜ, ಜೊತೆ ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಅಕ್ಷಯನಗರ, ಕೋಶಾಧಿüಕಾರಿಯಾಗಿ ರಮೇಶ್ ಜಾಮೇಗೌಡ, ಸಹ ಕೋಶಾಧಿಕಾರಿಯಾಗಿ ಚನ್ನಯ್ಯ ಕೊಡಗಿ ಇವರುಗಳನ್ನು ಆಯ್ಕೆ ಮಾಡಲಾಯಿತು. ಸಂಘಟನಾ ಕಾರ್ಯದರ್ಶಿಗಳು, ಗೌರವ ಸಲಹೆಗಾರರು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ದ.ಕ. ಜಿಲ್ಲಾ ಘಟಕದ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ, ಪ್ರಧಾನ ಸಂಚಾಲಕರಾಗಿ ಡಾ. ನಿರಂಜನ್ ರೈ ನೇಮಕ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya
error: Content is protected !!