30.2 C
ಪುತ್ತೂರು, ಬೆಳ್ತಂಗಡಿ
August 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಸಂಸ್ಕೃತೋತ್ಸವ

ಉಜಿರೆ :”ಸಂಸ್ಕೃತವನ್ನು ಕಲಿತು ಸುಸಂಸ್ಕೃತರಾಗಿ, ಆಧುನಿಕ ಮೋಹಕೊಳಗಾಗಿ ಸಂಸ್ಕೃತವನ್ನು ನಿರ್ಲಕ್ಷಿಸದೆ ಅಧ್ಯಯನ ಮಾಡಿ. ಸಂಸ್ಕೃತವನ್ನು ಮಾತಾಡುವ, ಸಂಸ್ಕೃತವನ್ನು ಇಡುವ, ಸಂಸ್ಕೃತವನ್ನು ರಕ್ಷಿಸುವ ಹಾಗೂ ವರ್ಧಿಸುವ” ಎಂದು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ) ಸಂಸ್ಕೃತ ಅಧ್ಯಾಪಕ ಹರೀಶ್ ಕುಮಾರ್.ಎಂ ಇವರು ಹೇಳಿದರು.

ಇವರು ಆ.28 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ‘ಆತ್ಮಾನಂ ಸಂಸ್ಕೃತಂ ಮನ್ಯೆ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಸಂಸ್ಕೃತ ಜಯ ಘೋಷಣೆಗಳ ಮೆರವಣಿಗೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಪಂಚಾಂಗ ವಾಚನ, ಸುಭಾಷಿತ, ಸಮೂಹ ಗಾಯನ ಹಾಗೂ ವಿಶ್ವ ಸಂಸ್ಕೃತ ದಿನದ ಮಹತ್ವದ ಕುರಿತು ಭಾಷಣ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರು ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿ ಸಿದ್ಧಾಂತ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸುಜನಾ ವಾಲ್ತಾಜೆ ಸ್ವಾಗತಿಸಿ, ವಿದ್ಯಾರ್ಥಿ ಅತುಲ್ಯ ತೇಜ ವಂದಿಸಿದರು.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya
error: Content is protected !!