ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ವತಿಯಿಂದ ರಕ್ಷಾ ಬಂಧನದ ಅಂಗವಾಗಿ ಶಾಸಕ ಹರೀಶ್ ಪೂಂಜಾರವರಿಗೆ ,ಕುವೆಟ್ಟು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗಳಿಗೆ, ಮಾಲಾಡಿ ಮತ್ತು ಮಡಂತ್ಯಾರ್ ಗ್ರಾಮ್ ಪಂಚಾಯತ್ ನ ಸ್ವಚ್ಛತಾ ಸಿಬ್ಬಂದಿಗಳಿಗೆ ರಕ್ಷಾಬಂಧನವನ್ನು ಕಟ್ಟಿ , ಸಿಹಿ ಹಂಚಿ ಶುಭಾಶಯ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ತುಳಸಿ ಉಮೇಶ್, ಪೂರ್ಣಿಮಾ ಜಯಂತ್ ,ಉಪಾಧ್ಯಕ್ಷರಾದ ಶಾರದಾ ಚಾರ್ಮಾಡಿ, ಕಾರ್ಯದರ್ಶಿ ಶಶಿಕಲಾ ದೇವಪ್ಪ ಗೌಡ ,ಕೋಶಾಧಿಕಾರಿ ಶ್ರೀಮತಿ ಸಂಗೀತ ಶೆಟ್ಟಿ , ಮಂಜುಳ ನಡ, ಸವಿತಕುಲಾಲ್, ಮಂಜುಳ ಅತ್ತಾಜೆ ,ಜಿಲ್ಲಾ ಎಸ್ಸಿ ಮೋರ್ಚಾ ಸದಸ್ಯೆಯಾದ ಶ್ರೀಮತಿ ಚಂದ್ರಕಲಾ ಸದಸ್ಯರಾದ ಶ್ರೀಮತಿ ಜಯಂತಿ, ಮಡಂತ್ಯಾರ್ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಶ್ರೀಮತಿ ಶಶಿಪ್ರಭ ಮತ್ತು ಕುಕ್ಕಳ ಬೂತ್ ಕಾರ್ಯದರ್ಶಿಯಾದ ಶ್ರೀಮತಿ ರಾಜೇಶ್ವರಿ ಉಪಸ್ಥಿತರಿದ್ದರು.











