28.7 C
ಪುತ್ತೂರು, ಬೆಳ್ತಂಗಡಿ
August 28, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಆ.30: ತಾಲೂಕು ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ-ನೂತನ ಪದಾಧಿಕಾರಿಗಳ ಪದಗ್ರಹಣ

ಉಜಿರೆ: ತಾಲೂಕು ವೀರಶೈವ ಲಿಂಗಾಯತ ಸಂಘ ಇದರ ವಾರ್ಷಿಕೋತ್ಸವ, ಸಾಧಕರು-ನಿವೃತ್ತರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ೨೦೨೬-೨೮ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.೩೦ರಂದು ಉಜಿರೆ ಶಾರದಾ ಮಂಟಪದಲ್ಲಿ ನಡೆಯಲಿದೆ.

ಉಡುಪಿ ಅಲ್ಲಮಪ್ರಭು ಅನುಭಾವ ಪೀಠದ ಪೀಠಾಧಿಪತಿ ಶರಣ ಜಗನ್ನಾಥಪ್ಪ ಪನಸಾಲೆ ದೀಪ ಪ್ರಜ್ವಲನೆಗೊಳಿಸಲಿದ್ದಾರೆ. ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ವೀರಶೈವ ಲಿಂಗಾಯತ ಸಂಘದ ಅಧ್ಯಕ್ಷ ಪಂಚಾಕ್ಷರಪ್ಪ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಕ್ಕಮಗಳೂರು ನಿವೃತ್ತ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಹೆಚ್.ಎಮ್., ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಮಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸಪ್ಪ ರೊಟ್ಟಿ ಉಪಸ್ಥಿತರಿರುವರು. ಬೆಳ್ತಂಗಡಿ ತಾಲೂಕು ವೀರಶೈವ ಲಿಂಗಾಯತ ಸಂಘದ ಕಾರ್ಯದರ್ಶಿ ಕಲ್ಲೇಶಪ್ಪ ಕೆ.ಬಿ. ಉಪಸ್ಥಿತರಿರುವರು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನವೀನ್ ಪ್ರಕಾಶ್, ಉಪಾಧ್ಯಕ್ಷರಾಗಿ ಗಾಯತ್ರಿ ವಿಶ್ವನಾಥ ಲಿಂಗಾಯತ ಉಜಿರೆ, ವಿಠಲ ಲಿಂಗಾಯತ ಪುದ್ದೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಸೌಮ್ಯ ವಸಂತ್ ಬಟ್ಟಾಜೆ ಕಲ್ಮಂಜ, ಜೊತೆ ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಅಕ್ಷಯನಗರ, ಕೋಶಾಧಿüಕಾರಿಯಾಗಿ ರಮೇಶ್ ಜಾಮೇಗೌಡ, ಸಹ ಕೋಶಾಧಿಕಾರಿಯಾಗಿ ಚನ್ನಯ್ಯ ಕೊಡಗಿ ಇವರುಗಳನ್ನು ಆಯ್ಕೆ ಮಾಡಲಾಯಿತು. ಸಂಘಟನಾ ಕಾರ್ಯದರ್ಶಿಗಳು, ಗೌರವ ಸಲಹೆಗಾರರು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಪ್ರವಚನ

Suddi Udaya
error: Content is protected !!