30.2 C
ಪುತ್ತೂರು, ಬೆಳ್ತಂಗಡಿ
August 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಯುವ ಸಾಧಕಿಯೊಂದಿಗೆ ಸಂವಾದ ಕಾರ್ಯಕ್ರಮ

ಉಜಿರೆ: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಏಕಾಗ್ರತೆ ಹಾಗೂ ಒತ್ತಡವನ್ನು ಸಮರ್ಥವಾಗಿ ನಿಭಾಯಿಸುವ ಕೌಶಲವನ್ನು ಬೆಳೆಸುವ ಉದ್ದೇಶದಿಂದ ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಆ.28 ರಂದು ಯುವ ಸಾಧಕಿ ಹಾಗೂ ಯುವ ಮಾರ್ಗದರ್ಶಕಿ ವಿಷ್ಣುಪ್ರಿಯಾ ಪೈ ಅವರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.

“Beyond Limits: The Extraordinary Journey of a Young Achiever” ಎಂಬ ವಿಷಯದ ಕುರಿತು ಮಾತನಾಡಿದ ವಿಷ್ಣುಪ್ರಿಯಾ ಪೈ ಅವರು, ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಜೀವನದಲ್ಲಿ ಎದುರಾಗುವ ಒತ್ತಡ ಹಾಗೂ ಸವಾಲುಗಳನ್ನು ಧೈರ್ಯದಿಂದ ಎದುರಿಸುವುದು, ಸಮಯವನ್ನು ಸಮರ್ಪಕವಾಗಿ ನಿರ್ವಹಿಸುವುದು ಮತ್ತು ಗುರಿಯತ್ತ ಏಕಾಗ್ರತೆಯಿಂದ ಸಾಗುವ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳು ಒತ್ತಡವನ್ನು ಹೇಗೆ ನಿಭಾಯಿಸಬೇಕು ಹಾಗೂ ಭಾವನೆಗಳನ್ನು ಹೇಗೆ ನಿಯಂತ್ರಿಸಿಕೊಳ್ಳಬೇಕು ಎಂಬುದನ್ನು ವಿವರಿಸಿದ ಅವರು, ಭಾವನೆಗಳನ್ನು ನಿಯಂತ್ರಿಸಲು ಹಾಗೂ ಮನಸ್ಸನ್ನು ಶಾಂತವಾಗಿರಿಸಿಕೊಳ್ಳಲು ಕೆಲವು ಸರಳ ವ್ಯಾಯಾಮಗಳನ್ನು ಪ್ರಾಯೋಗಿಕವಾಗಿ ಕಲಿಸಿಕೊಟ್ಟರು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಶೈಕ್ಷಣಿಕ ಸಂಯೋಜಕ ಶಿಕ್ಷಕಿ ಶ್ರೀಮತಿ ಸುಮಾ ಶ್ರೀನಾಥ್ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿಗಳಾದ ಆತ್ಮೀಯ ಮತ್ತು ಸನಿಹಾ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಲಿಖಿತ್ ವಂದನಾರ್ಪಣೆ ಸಲ್ಲಿಸಿದರು.

ಯುವ ಸಾಧಕಿಯ ಅನುಭವ ಹಾಗೂ ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಪ್ರೇರಣೆಯ ಜೊತೆಗೆ ಒತ್ತಡ ನಿರ್ವಹಣೆ, ಆತ್ಮವಿಶ್ವಾಸ ಮತ್ತು ಗುರಿಸಾಧನೆಯ ಕುರಿತು ಹೊಸ ಚಿಂತನೆ ಮೂಡಿಸಿತು.

Related posts

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya

ಜ್ಯೋತಿಷ್ಯ ಶಾಸ್ತ್ರದ ಸಾಧನೆಗಾಗಿ ಬೆಳ್ತಂಗಡಿಯ ಯುವ ಜ್ಯೋತಿಷಿ ಯೋಗೀಶ್ ಆಚಾರ್ಯರಿಗೆ ಧ್ರುವ ನಕ್ಷತ್ರ ಅವಾರ್ಡ್

Suddi Udaya

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya
error: Content is protected !!