28.7 C
ಪುತ್ತೂರು, ಬೆಳ್ತಂಗಡಿ
August 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತ್ ಜೋಡೋ ಸಂಘಗಳ ಸ್ಥಾಪನೆಗೆ ದ.ಕ. ಉಸ್ತುವಾರಿ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಸಮಿತಿ ರಚನೆ ; ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಜ್ಯಾದ್ಯಂತ ‘ಭಾರತ್ ಜೋಡೋ ಸಂಘ’ಗಳ ಸ್ಥಾಪನೆ ಹಾಗೂ ಸಂಘಟನಾ ಚಟುವಟಿಕೆಗಳನ್ನು ಬಲಪಡಿಸುವ ಉದ್ದೇಶದಿಂದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಗಳ ರಚನೆ ಮತ್ತು ಸಮನ್ವಯದ ಜವಾಬ್ದಾರಿಯನ್ನು ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರಿಗೆ ವಹಿಸಲಾಗಿದೆ.

ಪಂಚಾಯತ್ ರಾಜ್ ಸಂಘಟನೆಯಲ್ಲಿ ಅವರು ತೋರಿದ ಸಕ್ರಿಯ ನಾಯಕತ್ವ, ಸಂಘಟನಾ ಸಾಮರ್ಥ್ಯ, ನಿರಂತರ ಜನಸಂಪರ್ಕ ಹಾಗೂ ಗ್ರಾಮೀಣ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವಲ್ಲಿ ವಹಿಸಿದ ಪ್ರಮುಖ ಪಾತ್ರವನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿ ನೀಡಲಾಗಿದೆ.

ಯುವಜನರನ್ನು ಸಂಘಟಿಸುವುದು, ಅವರಲ್ಲಿ ಸೌಹಾರ್ದತೆ, ಸಹೋದರತ್ವ, ಸಾಮಾಜಿಕ ಸಾಮರಸ್ಯ ಹಾಗೂ ನಾಯಕತ್ವದ ಮನೋಭಾವವನ್ನು ಬೆಳೆಸುವುದು ಮತ್ತು ಗ್ರಾಮೀಣ ಭಾಗದಿಂದಲೇ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ಅನುಭವ ಪರಿಣಾಮಕಾರಿಯಾಗಲಿದೆ ಎಂದು ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಯೋಜಕರನ್ನಾಗಿ ನೇಮಿಸಿ, ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ.

ಸಮಿತಿಯ ಸದಸ್ಯರಾಗಿ ಮುಡಿಪು ಬ್ಲಾಕ್ ಶ್ರೀಮತಿ ವೃಂದಾ ಪೂಜಾರಿ, ಬೆಳ್ತಂಗಡಿ ಅಬ್ದುಲ್ ರಜಾಕ್, ಮುಲ್ಕಿ ಬ್ಲಾಕ್ ಬೋಳ ಸರ್ಫರಾಜ್, ಪುತ್ತೂರು ಸಂತೋಷ್ ಭಂಡಾರಿ, ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!