30.2 C
ಪುತ್ತೂರು, ಬೆಳ್ತಂಗಡಿ
August 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹನಾ ಶ್ರೀ ಫೌಂಡೇಶನ್ ವತಿಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ

ಬಂಗಾಡಿ: ಸರಕಾರಿ ಶಾಲೆಗಳ ಬಲವರ್ಧನೆಯ ಸದುದ್ದೇಶದಿಂದ ಬಂಗಾಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಹನಾಶ್ರೀ ಫೌಂಡೇಶನ್ ಅಧ್ಯಕ್ಷ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿ ರಾಜೇಶ್ ಪುದುಶೇರಿಯವರಿಂದ ಕ್ರೀಡಾ ಸಮವಸ್ತ್ರವನ್ನು ಉಚಿತವಾಗಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಂಘದ ಉಪಾಧ್ಯಕ್ಷ ಕೇಶವ ಗೌಡ ವಹಿಸಿದರು.

ಸಮವಸ್ತ್ರ ದಾನಿಗಳಾದ ರಾಜೇಶ್ ಪುದುಶೇರಿ ಇವರು ಕಾರ್ಯಕ್ರಮದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ತಮ್ಮ ಸಂಸ್ಥೆಯಿಂದ ಇದು ಮೊದಲ ಕೊಡುಗೆಯಾಗಿದ್ದು ಮುಂದಿನ ದಿನಗಳಲ್ಲಿ ನಿಮ್ಮೊಂದಿಗೆ ಕೈ ಜೋಡಿಸುವುದಾಗಿ ಭರವಸೆ ನೀಡಿದರು. ಸಮವಸ್ತ್ರ ಕೊಡುಗೆ ನೀಡಿದ ಸಹನಾಶ್ರೀ ಫೌಂಡೇಶನ್ ಅಧ್ಯಕ್ಷ ರಾಜೇಶ್ ಪುದುಶೇರಿ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಹನಶ್ರೀ ಫೌಂಡೇಶನ್ ನಿರ್ದೇಶಕರು, ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷೆ ಆಶಾಲತಾ, ಆನಂದ ಹಡೀಲು, ಲಕ್ಷ್ಮಣ ಗೌಡ ಇರ್ತಿಲಾಲ್, ಅಬ್ದುಲ್ ಸತ್ತಾರ್, ವಿಶ್ವನಾಥ್ ಉದ್ಧಾರ,ಉಮೇಶ್ ಪೂಜಾರಿ, ವೆಂಕಪ್ಪ ಮೂಲ್ಯ, ವೀರಪ್ಪ ಮೊಯ್ಲಿ, ಚಂದ್ರಶೇಖರ ಸುವರ್ಣ, ನವೀನ್ ಕುಮಾರ್ ಬಂಗಾಡಿ, ಹಾಸನ್, ನಿರ್ಮಲ, ಪ್ರದೀಪ್ ಕುಮಾರ್, ಪ್ರಶಾಂತ್ ಬಂಗಾಡಿ, ಕರೀಂ ಸಾಹೇಬ್, ಎಸ್ ಡಿ ಎಂ ಸಿ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಉಪಾಧ್ಯಯಿನಿ ಚಂದ್ರಕಲಾ ಸ್ವಾಗತಿಸಿ, ಸಹ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ಕು.ದೇವಿಕಾ ವಂದಿಸಿದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎನ್‌ಡಿಆರ್‌ಎಫ್ ಮಾಹಿತಿ ಕಾರ್ಯಾಗಾರ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya
error: Content is protected !!