28.7 C
ಪುತ್ತೂರು, ಬೆಳ್ತಂಗಡಿ
August 28, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಆ.30: ತಾಲೂಕು ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ-ನೂತನ ಪದಾಧಿಕಾರಿಗಳ ಪದಗ್ರಹಣ

ಉಜಿರೆ: ತಾಲೂಕು ವೀರಶೈವ ಲಿಂಗಾಯತ ಸಂಘ ಇದರ ವಾರ್ಷಿಕೋತ್ಸವ, ಸಾಧಕರು-ನಿವೃತ್ತರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ೨೦೨೬-೨೮ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.೩೦ರಂದು ಉಜಿರೆ ಶಾರದಾ ಮಂಟಪದಲ್ಲಿ ನಡೆಯಲಿದೆ.

ಉಡುಪಿ ಅಲ್ಲಮಪ್ರಭು ಅನುಭಾವ ಪೀಠದ ಪೀಠಾಧಿಪತಿ ಶರಣ ಜಗನ್ನಾಥಪ್ಪ ಪನಸಾಲೆ ದೀಪ ಪ್ರಜ್ವಲನೆಗೊಳಿಸಲಿದ್ದಾರೆ. ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ವೀರಶೈವ ಲಿಂಗಾಯತ ಸಂಘದ ಅಧ್ಯಕ್ಷ ಪಂಚಾಕ್ಷರಪ್ಪ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಕ್ಕಮಗಳೂರು ನಿವೃತ್ತ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಹೆಚ್.ಎಮ್., ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಮಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸಪ್ಪ ರೊಟ್ಟಿ ಉಪಸ್ಥಿತರಿರುವರು. ಬೆಳ್ತಂಗಡಿ ತಾಲೂಕು ವೀರಶೈವ ಲಿಂಗಾಯತ ಸಂಘದ ಕಾರ್ಯದರ್ಶಿ ಕಲ್ಲೇಶಪ್ಪ ಕೆ.ಬಿ. ಉಪಸ್ಥಿತರಿರುವರು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನವೀನ್ ಪ್ರಕಾಶ್, ಉಪಾಧ್ಯಕ್ಷರಾಗಿ ಗಾಯತ್ರಿ ವಿಶ್ವನಾಥ ಲಿಂಗಾಯತ ಉಜಿರೆ, ವಿಠಲ ಲಿಂಗಾಯತ ಪುದ್ದೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಸೌಮ್ಯ ವಸಂತ್ ಬಟ್ಟಾಜೆ ಕಲ್ಮಂಜ, ಜೊತೆ ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಅಕ್ಷಯನಗರ, ಕೋಶಾಧಿüಕಾರಿಯಾಗಿ ರಮೇಶ್ ಜಾಮೇಗೌಡ, ಸಹ ಕೋಶಾಧಿಕಾರಿಯಾಗಿ ಚನ್ನಯ್ಯ ಕೊಡಗಿ ಇವರುಗಳನ್ನು ಆಯ್ಕೆ ಮಾಡಲಾಯಿತು. ಸಂಘಟನಾ ಕಾರ್ಯದರ್ಶಿಗಳು, ಗೌರವ ಸಲಹೆಗಾರರು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ : ತಿಥಿ ಕಾರ್ಯಕ್ರಮ ಪದಾಥ೯ಕ್ಕೆ ಬಡಿಸಲು ನಾಲ್ಕು ಆಮೆಗಳ ಬೇಟೆ: ನಾಲ್ಕು ಮಂದಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ದಿಡುಪೆ ಫಾಲ್ಸ್‌ನಲ್ಲಿ ನಿಯಮ ಉಲ್ಲಂಘನೆ; ಹೋಂಸ್ಟೇ ಮಾಲೀಕರಿಗೆ ದಂಡ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya
error: Content is protected !!