August 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಬ್ಯಾಡ್ಮಿಂಟನ್ ಪಂದ್ಯಾವಳಿ

ಉಜಿರೆ: ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ, ಸ್ಪರ್ಧಾ ಮನೋಭಾವ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದಿಂದ ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ಹಾಗೂ ಐಕ್ಸ್ (AICS) ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಬಿ.ಎಸ್.ಇ. ಹಾಗೂ ಐ.ಸಿ.ಎಸ್.ಇ. ಶಾಲೆಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಜಿಲ್ಲಾ ಮಟ್ಟದ ‘ಎಸ್.ಡಿ.ಎಂ. ಫ್ಲೈ ಹೈ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್’ಗೆ ಚಾಲನೆ ನೀಡಲಾಯಿತು.

ಉಜಿರೆಯ ಎಸ್.ಡಿ.ಎಂ. ಪದವಿ ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ಆ. 28 ರಂದು ನಡೆದ ಪಂದ್ಯಾವಳಿಯ ಉದ್ಘಾಟನೆಯನ್ನು ಉಜಿರೆ ಎಸ್.ಡಿ.ಎಂ.ಇ. ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಇವರು ನೆರವೇರಿಸಿ, ಕ್ರೀಡಾಪಟುಗಳಿಗೆ ಶುಭಹಾರೈಸಿದರು.

ಇಂದು ನಡೆದ ಅಂಡರ್-14 ವಯೋಮಾನದ ಜೂನಿಯರ್ ವಿಭಾಗದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಾಲೆಗಳ ಒಟ್ಟು 40 ತಂಡಗಳು ಉತ್ಸಾಹದಿಂದ ಭಾಗವಹಿಸಿದವು. ಕ್ರೀಡಾಪಟುಗಳು ಉತ್ತಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಪಂದ್ಯಾವಳಿಗೆ ಮೆರುಗು ತಂದರು.

ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ಕ್ರೀಡಾ ಸ್ಫೂರ್ತಿ ಹಾಗೂ ಆರೋಗ್ಯಕರ ಸ್ಪರ್ಧಾ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ‘Smash Your Limits, Fly High!’ ಎಂಬ ಆಶಯದೊಂದಿಗೆ ನಡೆಯುತ್ತಿರುವ ಈ ಚಾಂಪಿಯನ್‌ಶಿಪ್ ವಿದ್ಯಾರ್ಥಿಗಳಿಗೆ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮವನ್ನು ಶಾಲೆಯ ಕ್ರೀಡಾ ಶಿಕ್ಷಣ ಶಿಕ್ಷಕ ಶ್ರೀ ಸಂತೋಷ್ ಹಾಗೂ ಶಿಕ್ಷಕಿ ಶ್ರೀಮತಿ ಪೌಲಿನ್ ಸಂಯೋಜಿಸಿ, ಶಿಕ್ಷಕಿ ಶ್ರೀಮತಿ ನೀತು ಪ್ರಸಾದ್ ನಿರೂಪಿಸಿದರು.

Related posts

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

Suddi Udaya

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya
error: Content is protected !!