28.7 C
ಪುತ್ತೂರು, ಬೆಳ್ತಂಗಡಿ
August 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ಕೊಯ್ಯೂರು : “ವಿದ್ಯಾರ್ಥಿಗಳಿಗೆ ಮನೆಯಲ್ಲಿ ಕಲಿಕೆಯ ವಾತಾವರಣ ನಿರ್ಮಾಣ ಮಾಡಬೇಕು. ಪೋಷಕರು ಶಿಕ್ಷಕರೊಂದಿಗೆ ನಿರಂತರ ಸಂಪರ್ಕದಲ್ಲಿ ಇರಬೇಕು. ಆಗ ವಿದ್ಯಾರ್ಥಿಗಳ ಯಶಸ್ಸಿಗೆ ಸಹಕಾರಿಯಾಗುತ್ತದೆ ” ಎಂದು ಧರ್ಮಸ್ಥಳ ಎಸ್ ಡಿ ಎಂ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಬಿ.ಸೋಮಶೇಖರ ಶೆಟ್ಟಿ ಅಭಿಪ್ರಾಯ ಪಟ್ಟರು.

ಅವರು ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜ್ ನ ಪೋಷಕರ ಸಭೆಯಲ್ಲಿ ವಿದ್ಯಾರ್ಥಿಗಳ ಹೆತ್ತವರನ್ನು ಉದ್ದೇಶಿಸಿ ಮಾತನಾಡುತ್ತಾ “ಯಶಸ್ಸಿಗೆ ಪರಿಶ್ರಮ ಬಹಳ ಮುಖ್ಯ. ಅಂತೆಯೇ ಯಶಸ್ಸನ್ನು ಪಡೆಯಲು ಮೆಟ್ಟಿಲುಗಳನ್ನು ಏರಬೇಕು ವಿನಃ ಲಿಫ್ಟ್ ಮೂಲಕ ಸಾಧ್ಯವಾಗುವುದಿಲ್ಲ” ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಮೋಹನ ಗೌಡ ವಹಿಸಿಕೊಂಡಿದ್ದರು. ಪೋಷಕರಾದ ಸುರೇಶ್ ಬಂದಾರು ಸಾಂದರ್ಭಿಕವಾಗಿ ಮಾತನಾಡಿದರು.
ವಿದ್ಯಾರ್ಥಿನಿಯರಾದ ರಶ್ಮಿತ, ದಿವ್ಯ, ಕೃಪಾ, ಪ್ರಜ್ಞಾ, ಯಜ್ಞಶ್ರೀ ಪ್ರಾರ್ಥನೆ ಗೈದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವ್ಯ ಎಂ. ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕ ಸಂತೋಷ್ ಕುಮಾರ್ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು. ಕನ್ನಡ ಭಾಷಾ ಉಪನ್ಯಾಸಕಿ ಶ್ರೀಮತಿ ರಶ್ಮಿ ದೇವಿ, ಪ್ರಶಿಕ್ಷಣಾರ್ಥಿಗಳಾದ ಕುಮಾರಿ ಹರ್ಷಿಣಿ, ಆಮೀರ್ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ

Suddi Udaya

ವಿಕಲಚೇತನ ಯುವಕನ ಸ್ವಾವಲಂಬನೆಯ ಹೆಜ್ಜೆ: ರಾಕೇಶ್ ಹೆಗ್ಡೆ ಅವರಿಂದ ಚಿರು ಟೀಮ್’ ಜರ್ಸಿ ಅನಾವರಣ

Suddi Udaya

ಲೇಡಿ ಜೆಸಿ ಮತ್ತು ಜೂನಿಯರ್ ಸಮ್ಮೇಳನ: ಜೆಸಿಐ ಉಜಿರೆ ಸಿಟಿ ಘಟಕಕ್ಕೆ ವಲಯದ ಅತ್ಯುತ್ತಮ ಲೇಡಿ ಜೆಸಿ ವಿಂಗ್ ರನ್ನರ್ ಅಪ್ ಪ್ರತಿಷ್ಠಿತ ಪ್ರಶಸ್ತಿಯೊಂದಿಗೆ ಹಲವು ಗೌರವ ಮನ್ನಣೆಗಳು

Suddi Udaya
error: Content is protected !!