30.2 C
ಪುತ್ತೂರು, ಬೆಳ್ತಂಗಡಿ
August 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹನಾ ಶ್ರೀ ಫೌಂಡೇಶನ್ ವತಿಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ

ಬಂಗಾಡಿ: ಸರಕಾರಿ ಶಾಲೆಗಳ ಬಲವರ್ಧನೆಯ ಸದುದ್ದೇಶದಿಂದ ಬಂಗಾಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಹನಾಶ್ರೀ ಫೌಂಡೇಶನ್ ಅಧ್ಯಕ್ಷ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿ ರಾಜೇಶ್ ಪುದುಶೇರಿಯವರಿಂದ ಕ್ರೀಡಾ ಸಮವಸ್ತ್ರವನ್ನು ಉಚಿತವಾಗಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಂಘದ ಉಪಾಧ್ಯಕ್ಷ ಕೇಶವ ಗೌಡ ವಹಿಸಿದರು.

ಸಮವಸ್ತ್ರ ದಾನಿಗಳಾದ ರಾಜೇಶ್ ಪುದುಶೇರಿ ಇವರು ಕಾರ್ಯಕ್ರಮದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ತಮ್ಮ ಸಂಸ್ಥೆಯಿಂದ ಇದು ಮೊದಲ ಕೊಡುಗೆಯಾಗಿದ್ದು ಮುಂದಿನ ದಿನಗಳಲ್ಲಿ ನಿಮ್ಮೊಂದಿಗೆ ಕೈ ಜೋಡಿಸುವುದಾಗಿ ಭರವಸೆ ನೀಡಿದರು. ಸಮವಸ್ತ್ರ ಕೊಡುಗೆ ನೀಡಿದ ಸಹನಾಶ್ರೀ ಫೌಂಡೇಶನ್ ಅಧ್ಯಕ್ಷ ರಾಜೇಶ್ ಪುದುಶೇರಿ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಹನಶ್ರೀ ಫೌಂಡೇಶನ್ ನಿರ್ದೇಶಕರು, ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷೆ ಆಶಾಲತಾ, ಆನಂದ ಹಡೀಲು, ಲಕ್ಷ್ಮಣ ಗೌಡ ಇರ್ತಿಲಾಲ್, ಅಬ್ದುಲ್ ಸತ್ತಾರ್, ವಿಶ್ವನಾಥ್ ಉದ್ಧಾರ,ಉಮೇಶ್ ಪೂಜಾರಿ, ವೆಂಕಪ್ಪ ಮೂಲ್ಯ, ವೀರಪ್ಪ ಮೊಯ್ಲಿ, ಚಂದ್ರಶೇಖರ ಸುವರ್ಣ, ನವೀನ್ ಕುಮಾರ್ ಬಂಗಾಡಿ, ಹಾಸನ್, ನಿರ್ಮಲ, ಪ್ರದೀಪ್ ಕುಮಾರ್, ಪ್ರಶಾಂತ್ ಬಂಗಾಡಿ, ಕರೀಂ ಸಾಹೇಬ್, ಎಸ್ ಡಿ ಎಂ ಸಿ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಉಪಾಧ್ಯಯಿನಿ ಚಂದ್ರಕಲಾ ಸ್ವಾಗತಿಸಿ, ಸಹ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ಕು.ದೇವಿಕಾ ವಂದಿಸಿದರು.

Related posts

ಜಾಗತಿಕ ಹಾದಿಯಲ್ಲಿ ಅಗ್ರಿಲೀಫ್‌ಗೆ ಭಾರೀ ಬಲ: ರೂ.10 ಕೋಟಿ ನಿಧಿ ಸಂಗ್ರಹ — ಭಾರತ ಮತ್ತು ಯುರೋಪ್–ಯುಕೆ ವಿಸ್ತರಣೆಗೆ ವೇಗ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆಗೆ ಆಹ್ವಾನ

Suddi Udaya
error: Content is protected !!