28.7 C
ಪುತ್ತೂರು, ಬೆಳ್ತಂಗಡಿ
August 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಆ.27 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಪ್ರಾರ್ಥನಾ ವಿಧಿಯೊಂದಿಗೆ ಈದ್ ಮಿಲಾದ್ ಆಚರಿಸಲಾಯಿತು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಹಾಡು, ನೃತ್ಯ ಮತ್ತು ದಫ್ ಮೂಲಕ ಮನರಂಜಿಸಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ | ಸ್ಟ್ಯಾನಿ ಗೋವಿಯಸ್ ರವರು ವಹಿಸಿ ಮಾತನಾಡಿ, “ಪ್ರತಿಯೊಂದು ಧರ್ಮವೂ ಬೋಧಿಸುವ ಮೌಲ್ಯಗಳನ್ನು ಗೌರವಿಸಿ. ಸಮಾಜದಲ್ಲಿ ಒಳ್ಳೆಯ ಮಾನವರಾಗಿ ಬಾಳಿ.” ಎಂದು ಹೇಳಿ ಈದ್ ಮಿಲಾದ್ ಶುಭಾಶಯವನ್ನು ಕೋರಿದರು.

ಮುಖ್ಯ ಅತಿಥಿಗಳಾಗಿ ಯೆನೆಪೋಯ ಕಾಲೇಜಿನ ಪ್ರೊ |ಡಾ| ನಿಯಾಝ್ ಪಣಕಜೆ ರವರು ಆಗಮಿಸಿ ಪ್ರೀತಿ, ಕ್ಷಮೆ, ಶಾಂತಿ, ದಾನಧರ್ಮ ಮತ್ತು ಶಿಸ್ತು ಇವು ಯಾವುದೇ ಒಂದು ಧರ್ಮಕ್ಕೆ ಸೀಮಿತವಾದ ಮೌಲ್ಯಗಳಲ್ಲ. ಇವು ಪ್ರತಿಯೊಬ್ಬ ಒಳ್ಳೆಯ ಮನುಷ್ಯನ ಜೀವನದ ಆಧಾರವಾಗಿವೆ. ವಿವಿಧ ಧರ್ಮಗಳು ನಮಗೆ ಕಲಿಸುವ ಉತ್ತಮ ಮೌಲ್ಯಗಳನ್ನು ಗೌರವಿಸಿ, ಒಳ್ಳೆಯ ಮನುಷ್ಯರಾಗಿ ಸಮಾಜದಲ್ಲಿ ಬದುಕುವುದು ನಮ್ಮ ಕರ್ತವ್ಯ. ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಯರಾದ ವಂ| ಸ್ವಾ| ದೀಪಕ್ ಲಿಯೋ ಡೇಸ, ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ನೆಲ್ಸನ್ ಲಸ್ರಾದೋ, ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಸಂಯೋಜಕರಾದ ಲಿಯೋ ನೋರೊನ್ಹಾ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಪ್ರವೀಣ್ ಚಂದ್ರಶೆಟ್ಟಿ , ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅನ್ನ ಅಭಿಗೆಲ್ ಪಿಂಟೋ ಮತ್ತು ಪ್ರತಮ್ ಶೆಟ್ಟಿ ನಿರೂಪಿಸಿ, ಗ್ಲ್ಯಾನ್ಸನ್ ವೇಗಸ್ ಸ್ವಾಗತಿಸಿ, ಸೋನಾಲ್ ಡಿಸೋಜ ಧನ್ಯವಾದವನ್ನು ಸಮರ್ಪಿಸಿದರು.

Related posts

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya
error: Content is protected !!